ಓದುಗರ ಪತ್ರ
ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ದೇವಲಾಪುರ, ದೇವಲಾಪುರದ ಹುಂಡಿ, ಪುರದ ಶೆಡ್ಡು, ತೆಲುಗುಮಸಳ್ಳಿ, ಕಾಟವಾಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಆನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರ ಬೆಳೆಗಳು ಕಾಡುಪ್ರಾಣಿಗಳ ಪಾಲಾಗುತ್ತಿವೆ.
ಈ ಗ್ರಾಮಗಳ ರೈತರು ಸಾಲ ಮಾಡಿ ಕೃಷಿ ಮಾಡುತ್ತಿದ್ದಾರೆ. ಅಲ್ಲದೆ ಹಗಲು ರಾತ್ರಿ ಎನ್ನದೆ ತಮ್ಮ ಜಮೀನುಗಳಲ್ಲಿ ಬೆಳೆದಿರುವ ರಾಗಿ, ಜೋಳ, ಶುಂಠಿ, ಬಾಳೆ, ಕಬ್ಬು ಮುಂತಾದ ಬೆಳೆಗಳನ್ನು ಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಕಾವಲು ಕಾಯುತ್ತಾರೆ. ಇಷ್ಟಿದ್ದರೂ ಬೆಳೆಗಳು ರೈತರ ಕೈ ಸೇರುತ್ತವೆ ಎಂಬ ಖಾತರಿ ಇಲ್ಲ. ಈ ಭಾಗಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳೆದ ಬೆಳೆಗಳು ಕೈ ಸೇರುವ ಮುನ್ನವೇ ಕಾಡಾನೆಗಳು ಬೆಳೆಗಳನ್ನು ನಾಶ ಮಾಡುತ್ತಿವೆ. ಇದರಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ.
ಅಲ್ಲದೆ ಅನೇಕ ರೈತರು ಕಾಡಾನೆಗಳ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳೂ ಇವೆ. ಪ್ರತಿ ಬಾರಿಯೂ ರೈತರಿಗೆ ಇದೇ ಸಮಸ್ಯೆ ಎದುರಾಗುತ್ತಿದ್ದು, ಸಂಕಷ್ಟದಲ್ಲಿ ಜೀವನ ಸಾಗಿಸುವಂತಾಗಿದೆ. ಅರಣ್ಯ ಇಲಾಖೆಯವರಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಈ ಭಾಗದ ಚುನಾಯಿತ ಪ್ರತಿನಿಧಿಗಳು, ಆನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಜತೆಗೆ ಕಾಡಿನ ಸುತ್ತ ರೈಲ್ವೆ ಕಂಬಿ ಬ್ಯಾರಿಕೇಡ್ಗಳನ್ನು ಅಳವಡಿಸಬೇಕಿದೆ. ಇಲ್ಲದಿದ್ದರೆ ರೈತರ ಬದುಕು ದುಸ್ತರವಾಗಲಿದೆ.
-ಶಾಂತಮಲ್ಲಪ್ಪ, ದೇವಲಾಪುರದ ಹುಂಡಿ, ಸರಗೂರು ತಾ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…