ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ ಮೇಯರ್ ಡಿ.ಸತ್ಯನಾರಾಯಣ ಅವರು ಉದ್ಘಾಟಿಸಿದ್ದರು. ಕೆಲವು ದಿನಗಳ ನಂತರ ಕಟ್ಟಡ ಬಳಕೆಯಾಗದೇ ಬೀಗ ಹಾಕಲಾಯಿತು. ದಶಕಗಳು ಕಳೆದು, ಆ ಕಟ್ಟಡದ ಕಿಟಕಿ, ಬಾಗಿಲುಗಳೂ ಮಾಯವಾದವು ಗ್ರಂಥಾಲಯವು ತ್ಯಾಜ್ಯವಸ್ತುಗಳನ್ನು ಬಿಸಾಡುವ ತಾಣವಾಯಿತು. ೨೦೨೫ರಲ್ಲಿ ಶಿಥಿಲವಾಗಿದ್ದ ಕಟ್ಟಡವನ್ನು ಕೆಡವಿ, ಮೈಸೂರು ಮಹಾನಗರ ಪಾಲಿಕೆಯಿಂದ ಅದೇ ಜಾಗದಲ್ಲಿ ಕಂಟೈನರ್ ತಂದಿಟ್ಟು ಅದನ್ನು ಪೌರ ಬಂಧುಗಳ ವಿಶ್ರಾಂತಿ ಗೃಹವನ್ನಾಗಿ ಪರಿವರ್ತಿಸಲಾಗಿದೆ. ಇದುವರೆಗೂ ಅದರ ಬೀಗ ತೆಗೆದಿಲ್ಲ, ಒಬ್ಬ ಪೌರ ಬಂಧುವೂ ಅದರಲ್ಲಿ ವಿಶ್ರಾಂತಿ ಪಡೆದ ನಿದರ್ಶನವಿಲ್ಲ. ಆದರೆ ಅದರ ಸುತ್ತಲಿನ ಜಾಗ ಇಂದಿಗೂ ಸಾರ್ವಜನಿಕರ ಮೂತ್ರಾಲಯವಾಗಿ ಮತ್ತು ತ್ಯಾಜ್ಯವಸ್ತುಗಳನ್ನು ಬಿಸಾಡುವ ತಾಣವಾಗಿ ಮಾರ್ಪಟ್ಟಿದೆ. ಸಂಬಂಧಪಟ್ಟವರು ಕೂಡಲೇ ಪೌರ ಕಾರ್ಮಿಕರ ವಿಶ್ರಾಂತಿ ಗೃಹದ ಬಾಗಿಲು ತೆರೆದು ಸದ್ಬಳಕೆಯಾಗಲು ಕ್ರಮ ಕೈಗೊಳ್ಳಬೇಕು ಹಾಗೂ ವಿಶ್ರಾಂತಿ ಗೃಹದ ಸುತ್ತಲಿನ ತ್ಯಾಜ್ಯವಸ್ತುಗಳನ್ನು ತೆರವುಗೊಳಿಸುವ ಮೂಲಕ ನೈರ್ಮಲ್ಯ ಕಾಪಾಡಬೇಕು.
-ವಸಂತಕುಮಾರ್ ಮೈಸೂರುಮಠ್, ತಿಲಕ್ ನಗರ, ಮೈಸೂರು
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…