ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ ಮೇಯರ್ ಡಿ.ಸತ್ಯನಾರಾಯಣ ಅವರು ಉದ್ಘಾಟಿಸಿದ್ದರು. ಕೆಲವು ದಿನಗಳ ನಂತರ ಕಟ್ಟಡ ಬಳಕೆಯಾಗದೇ ಬೀಗ ಹಾಕಲಾಯಿತು. ದಶಕಗಳು ಕಳೆದು, ಆ ಕಟ್ಟಡದ ಕಿಟಕಿ, ಬಾಗಿಲುಗಳೂ ಮಾಯವಾದವು ಗ್ರಂಥಾಲಯವು ತ್ಯಾಜ್ಯವಸ್ತುಗಳನ್ನು ಬಿಸಾಡುವ ತಾಣವಾಯಿತು. ೨೦೨೫ರಲ್ಲಿ ಶಿಥಿಲವಾಗಿದ್ದ ಕಟ್ಟಡವನ್ನು ಕೆಡವಿ, ಮೈಸೂರು ಮಹಾನಗರ ಪಾಲಿಕೆಯಿಂದ ಅದೇ ಜಾಗದಲ್ಲಿ ಕಂಟೈನರ್ ತಂದಿಟ್ಟು ಅದನ್ನು ಪೌರ ಬಂಧುಗಳ ವಿಶ್ರಾಂತಿ ಗೃಹವನ್ನಾಗಿ ಪರಿವರ್ತಿಸಲಾಗಿದೆ. ಇದುವರೆಗೂ ಅದರ ಬೀಗ ತೆಗೆದಿಲ್ಲ, ಒಬ್ಬ ಪೌರ ಬಂಧುವೂ ಅದರಲ್ಲಿ ವಿಶ್ರಾಂತಿ ಪಡೆದ ನಿದರ್ಶನವಿಲ್ಲ. ಆದರೆ ಅದರ ಸುತ್ತಲಿನ ಜಾಗ ಇಂದಿಗೂ ಸಾರ್ವಜನಿಕರ ಮೂತ್ರಾಲಯವಾಗಿ ಮತ್ತು ತ್ಯಾಜ್ಯವಸ್ತುಗಳನ್ನು ಬಿಸಾಡುವ ತಾಣವಾಗಿ ಮಾರ್ಪಟ್ಟಿದೆ. ಸಂಬಂಧಪಟ್ಟವರು ಕೂಡಲೇ ಪೌರ ಕಾರ್ಮಿಕರ ವಿಶ್ರಾಂತಿ ಗೃಹದ ಬಾಗಿಲು ತೆರೆದು ಸದ್ಬಳಕೆಯಾಗಲು ಕ್ರಮ ಕೈಗೊಳ್ಳಬೇಕು ಹಾಗೂ ವಿಶ್ರಾಂತಿ ಗೃಹದ ಸುತ್ತಲಿನ ತ್ಯಾಜ್ಯವಸ್ತುಗಳನ್ನು ತೆರವುಗೊಳಿಸುವ ಮೂಲಕ ನೈರ್ಮಲ್ಯ ಕಾಪಾಡಬೇಕು.
-ವಸಂತಕುಮಾರ್ ಮೈಸೂರುಮಠ್, ತಿಲಕ್ ನಗರ, ಮೈಸೂರು
ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…
ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…
ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…
ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…
ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…
ಎಸ್.ಎಸ್.ಭಟ್ ನಂಜನಗೂಡು: ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿನ ಕಲಾ ವೈಭವ ಕಲಾಸಕ್ತರೂ ಸೇರಿದಂತೆ ಎಲ್ಲರ ಮನಸೂರೆಗೊಂಡಿತು. ಅನೇಕ ವರ್ಷಗಳಿಂದ…