Andolana originals

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ ಮೇಯರ್ ಡಿ.ಸತ್ಯನಾರಾಯಣ ಅವರು ಉದ್ಘಾಟಿಸಿದ್ದರು. ಕೆಲವು ದಿನಗಳ ನಂತರ ಕಟ್ಟಡ ಬಳಕೆಯಾಗದೇ ಬೀಗ ಹಾಕಲಾಯಿತು. ದಶಕಗಳು ಕಳೆದು, ಆ ಕಟ್ಟಡದ ಕಿಟಕಿ, ಬಾಗಿಲುಗಳೂ ಮಾಯವಾದವು ಗ್ರಂಥಾಲಯವು ತ್ಯಾಜ್ಯವಸ್ತುಗಳನ್ನು ಬಿಸಾಡುವ ತಾಣವಾಯಿತು. ೨೦೨೫ರಲ್ಲಿ ಶಿಥಿಲವಾಗಿದ್ದ ಕಟ್ಟಡವನ್ನು ಕೆಡವಿ, ಮೈಸೂರು ಮಹಾನಗರ ಪಾಲಿಕೆಯಿಂದ ಅದೇ ಜಾಗದಲ್ಲಿ ಕಂಟೈನರ್ ತಂದಿಟ್ಟು ಅದನ್ನು ಪೌರ ಬಂಧುಗಳ ವಿಶ್ರಾಂತಿ ಗೃಹವನ್ನಾಗಿ ಪರಿವರ್ತಿಸಲಾಗಿದೆ. ಇದುವರೆಗೂ ಅದರ ಬೀಗ ತೆಗೆದಿಲ್ಲ, ಒಬ್ಬ ಪೌರ ಬಂಧುವೂ ಅದರಲ್ಲಿ ವಿಶ್ರಾಂತಿ ಪಡೆದ ನಿದರ್ಶನವಿಲ್ಲ. ಆದರೆ ಅದರ ಸುತ್ತಲಿನ ಜಾಗ ಇಂದಿಗೂ ಸಾರ್ವಜನಿಕರ ಮೂತ್ರಾಲಯವಾಗಿ ಮತ್ತು ತ್ಯಾಜ್ಯವಸ್ತುಗಳನ್ನು ಬಿಸಾಡುವ ತಾಣವಾಗಿ ಮಾರ್ಪಟ್ಟಿದೆ. ಸಂಬಂಧಪಟ್ಟವರು ಕೂಡಲೇ ಪೌರ ಕಾರ್ಮಿಕರ ವಿಶ್ರಾಂತಿ ಗೃಹದ ಬಾಗಿಲು ತೆರೆದು ಸದ್ಬಳಕೆಯಾಗಲು ಕ್ರಮ ಕೈಗೊಳ್ಳಬೇಕು ಹಾಗೂ ವಿಶ್ರಾಂತಿ ಗೃಹದ ಸುತ್ತಲಿನ ತ್ಯಾಜ್ಯವಸ್ತುಗಳನ್ನು ತೆರವುಗೊಳಿಸುವ ಮೂಲಕ ನೈರ್ಮಲ್ಯ ಕಾಪಾಡಬೇಕು.

 -ವಸಂತಕುಮಾರ್ ಮೈಸೂರುಮಠ್, ತಿಲಕ್ ನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago