ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ ಮೇಯರ್ ಡಿ.ಸತ್ಯನಾರಾಯಣ ಅವರು ಉದ್ಘಾಟಿಸಿದ್ದರು. ಕೆಲವು ದಿನಗಳ ನಂತರ ಕಟ್ಟಡ ಬಳಕೆಯಾಗದೇ ಬೀಗ ಹಾಕಲಾಯಿತು. ದಶಕಗಳು ಕಳೆದು, ಆ ಕಟ್ಟಡದ ಕಿಟಕಿ, ಬಾಗಿಲುಗಳೂ ಮಾಯವಾದವು ಗ್ರಂಥಾಲಯವು ತ್ಯಾಜ್ಯವಸ್ತುಗಳನ್ನು ಬಿಸಾಡುವ ತಾಣವಾಯಿತು. ೨೦೨೫ರಲ್ಲಿ ಶಿಥಿಲವಾಗಿದ್ದ ಕಟ್ಟಡವನ್ನು ಕೆಡವಿ, ಮೈಸೂರು ಮಹಾನಗರ ಪಾಲಿಕೆಯಿಂದ ಅದೇ ಜಾಗದಲ್ಲಿ ಕಂಟೈನರ್ ತಂದಿಟ್ಟು ಅದನ್ನು ಪೌರ ಬಂಧುಗಳ ವಿಶ್ರಾಂತಿ ಗೃಹವನ್ನಾಗಿ ಪರಿವರ್ತಿಸಲಾಗಿದೆ. ಇದುವರೆಗೂ ಅದರ ಬೀಗ ತೆಗೆದಿಲ್ಲ, ಒಬ್ಬ ಪೌರ ಬಂಧುವೂ ಅದರಲ್ಲಿ ವಿಶ್ರಾಂತಿ ಪಡೆದ ನಿದರ್ಶನವಿಲ್ಲ. ಆದರೆ ಅದರ ಸುತ್ತಲಿನ ಜಾಗ ಇಂದಿಗೂ ಸಾರ್ವಜನಿಕರ ಮೂತ್ರಾಲಯವಾಗಿ ಮತ್ತು ತ್ಯಾಜ್ಯವಸ್ತುಗಳನ್ನು ಬಿಸಾಡುವ ತಾಣವಾಗಿ ಮಾರ್ಪಟ್ಟಿದೆ. ಸಂಬಂಧಪಟ್ಟವರು ಕೂಡಲೇ ಪೌರ ಕಾರ್ಮಿಕರ ವಿಶ್ರಾಂತಿ ಗೃಹದ ಬಾಗಿಲು ತೆರೆದು ಸದ್ಬಳಕೆಯಾಗಲು ಕ್ರಮ ಕೈಗೊಳ್ಳಬೇಕು ಹಾಗೂ ವಿಶ್ರಾಂತಿ ಗೃಹದ ಸುತ್ತಲಿನ ತ್ಯಾಜ್ಯವಸ್ತುಗಳನ್ನು ತೆರವುಗೊಳಿಸುವ ಮೂಲಕ ನೈರ್ಮಲ್ಯ ಕಾಪಾಡಬೇಕು.
-ವಸಂತಕುಮಾರ್ ಮೈಸೂರುಮಠ್, ತಿಲಕ್ ನಗರ, ಮೈಸೂರು
ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್ಜಿಎ…
ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…