ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದ್ದು, ಊಟ, ಉಪಾಹಾರ, ಕಾಫಿ ಸವಿಯುವ ಸಂದರ್ಭದಲ್ಲಿ ತರಗತಿಗಳಲ್ಲಿ ನಡೆದ ಘಟನೆಗಳು, ಅಧ್ಯಯನಕ್ಕೆ ಸಂಬಂಧಿಸಿದ ಚರ್ಚೆಗಳು, ಅಧ್ಯಾಪಕರ ನಡುವೆ ಚರ್ಚೆಗೂ ರೌಂಡ್ ಕ್ಯಾಂಟೀನ್ ವೇದಿಕೆಯಂತಿದೆ. ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವಾಗ ರೌಂಡ್ ಕ್ಯಾಂಟೀನ್ನನ್ನು ಮರೆಯಲಾಗುವುದಿಲ್ಲ.
ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದ್ದ ಉಪಾಹಾರಗೃಹ ಕಳೆದ ಒಂದು ವರ್ಷದಿಂದ ಮುಚ್ಚಿದ್ದು, ಅದರ ಒಳ ಮತ್ತು ಹೊರ ಆವರಣ ಕಸದ ರಾಶಿಗಳಿಂದ ತುಂಬಿ ತುಳುಕುತ್ತಿದೆ. ಕ್ಯಾಂಟೀನ್ ಪುನರಾರಂಭಿ ಸುವುದರೊಂದಿಗೆ ಆವರಣದಲ್ಲಿರುವ ಕಸವನ್ನು ತೆರವುಗೊಳಿಸಲು ಮೈಸೂರು ವಿವಿ ಅಧಿಕಾರಿಗಳು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…