Andolana originals

ಓದುಗರ ಪತ್ರ: ದೇವಸ್ಥಾನದ ಆಡಳಿತ ಮಂಡಳಿ ಜನಸ್ನೇಹಿಯಾಗಲಿ

ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಶ್ರೀ ಲಕ್ಷಿ ವೆಂಕಟೇಶ್ವರ ದೇವಸ್ಥಾನದಲ್ಲಿ ಲೋಪ ದೋಷಗಳು ಹೆಚ್ಚಾಗಿದ್ದು, ಆಡಳಿತ ಮಂಡಳಿಯ ಮೇಲೆ ಭಕ್ತಾದಿಗಳಿಗೆ ಅಸಮಾಧಾನ ಉಂಟಾಗುವಂತೆ ಮಾಡಿದೆ. ಈ ದೇವಾಲಯದಲ್ಲಿ ಭಕ್ತಾದಿಗಳು ತಮ್ಮ ಪೂರ್ವಜರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಪುದುವಟ್ಟನ್ನು ಇಡುವುದು ವಾಡಿಕೆ. ಅವರು ನಿಧನರಾದ ದಿನದಂದು ಅವರ ಹೆಸರಿನಲ್ಲಿ ಅವರ ಕುಟುಂಬಸ್ಥರು ಪುದವಟ್ಟನ್ನು ಇಟ್ಟು ಸಂಕಲ್ಪ ಮಾಡುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಪುದವಟ್ಟು ಇಟ್ಟ ವರಿಗೆ ಅವರ ಸಂಕಲ್ಪ ದಿನವನ್ನು ಪತ್ರದ ಮುಖೇನ ನೆನಪಿಸುವ ಅಥವಾ ದೂರವಾಣಿ ಮೂಲಕ ತಿಳಿಸುವ ಪ್ರಯತ್ನ ಮಾಡುತ್ತಿಲ್ಲ. ಈ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿಯ ಕಚೇರಿಯಲ್ಲಿ ವಿಚಾರಿಸಿದರೆ, ಅಲ್ಲಿನ ಸಿಬ್ಬಂದಿ ಏರುಧ್ವನಿಯಲ್ಲಿ ಮಾತನಾಡುತ್ತಾರೆ. ಇದೊಂದು ಐತಿಹಾಸಿಕ ದೇವಾಲಯ ವಾಗಿದ್ದು, ನಿತ್ಯ ಇಲ್ಲಿಗೆ ನೂರಾರು ಜನರು ಆಗಮಿಸುತ್ತಾರೆ. ಆದರೆ ಇಲ್ಲಿ ಟಿಕೆಟ್ ವಿತರಿಸಲು ಗಣಕ ಯಂತ್ರದ ವ್ಯವಸ್ಥೆ ಮಾಡಿಲ್ಲ. ಅಲ್ಲದೆ ಅಲ್ಲಿನ ಸಿಬ್ಬಂದಿ ಭಕ್ತಾದಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ. ಇನ್ನು ಪ್ರಸಾದದ ಗುಣಮಟ್ಟವೂ ಕಡಿಮೆಯಾಗಿದ್ದು, ವ್ಯವಸ್ಥಿತವಾಗಿ ವಿತರಿಸುವಲ್ಲಿಯೂ ಆಡಳಿತ ಮಂಡಳಿ ವಿಫಲವಾಗಿದೆ. ಇದರಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆಯಾಗುತ್ತಿದ್ದು, ಆಡಳಿತ ಮಂಡಳಿಯು ಈ ಬಗ್ಗೆ ಗಮನಹರಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಡೆದುಕೊಂಡು ದೇವಾಲಯದ ಸಿಬ್ಬಂದಿಗೆ ಭಕ್ತಾದಿಗಳೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಲಿ.

-ಭಾಸ್ಕರ್, ವಿ.ವಿ.ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

7 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

11 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

11 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

11 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

12 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

12 hours ago