Andolana originals

ಓದುಗರ ಪತ್ರ: ದೇವಸ್ಥಾನದ ಆಡಳಿತ ಮಂಡಳಿ ಜನಸ್ನೇಹಿಯಾಗಲಿ

ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಶ್ರೀ ಲಕ್ಷಿ ವೆಂಕಟೇಶ್ವರ ದೇವಸ್ಥಾನದಲ್ಲಿ ಲೋಪ ದೋಷಗಳು ಹೆಚ್ಚಾಗಿದ್ದು, ಆಡಳಿತ ಮಂಡಳಿಯ ಮೇಲೆ ಭಕ್ತಾದಿಗಳಿಗೆ ಅಸಮಾಧಾನ ಉಂಟಾಗುವಂತೆ ಮಾಡಿದೆ. ಈ ದೇವಾಲಯದಲ್ಲಿ ಭಕ್ತಾದಿಗಳು ತಮ್ಮ ಪೂರ್ವಜರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಪುದುವಟ್ಟನ್ನು ಇಡುವುದು ವಾಡಿಕೆ. ಅವರು ನಿಧನರಾದ ದಿನದಂದು ಅವರ ಹೆಸರಿನಲ್ಲಿ ಅವರ ಕುಟುಂಬಸ್ಥರು ಪುದವಟ್ಟನ್ನು ಇಟ್ಟು ಸಂಕಲ್ಪ ಮಾಡುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಪುದವಟ್ಟು ಇಟ್ಟ ವರಿಗೆ ಅವರ ಸಂಕಲ್ಪ ದಿನವನ್ನು ಪತ್ರದ ಮುಖೇನ ನೆನಪಿಸುವ ಅಥವಾ ದೂರವಾಣಿ ಮೂಲಕ ತಿಳಿಸುವ ಪ್ರಯತ್ನ ಮಾಡುತ್ತಿಲ್ಲ. ಈ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿಯ ಕಚೇರಿಯಲ್ಲಿ ವಿಚಾರಿಸಿದರೆ, ಅಲ್ಲಿನ ಸಿಬ್ಬಂದಿ ಏರುಧ್ವನಿಯಲ್ಲಿ ಮಾತನಾಡುತ್ತಾರೆ. ಇದೊಂದು ಐತಿಹಾಸಿಕ ದೇವಾಲಯ ವಾಗಿದ್ದು, ನಿತ್ಯ ಇಲ್ಲಿಗೆ ನೂರಾರು ಜನರು ಆಗಮಿಸುತ್ತಾರೆ. ಆದರೆ ಇಲ್ಲಿ ಟಿಕೆಟ್ ವಿತರಿಸಲು ಗಣಕ ಯಂತ್ರದ ವ್ಯವಸ್ಥೆ ಮಾಡಿಲ್ಲ. ಅಲ್ಲದೆ ಅಲ್ಲಿನ ಸಿಬ್ಬಂದಿ ಭಕ್ತಾದಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ. ಇನ್ನು ಪ್ರಸಾದದ ಗುಣಮಟ್ಟವೂ ಕಡಿಮೆಯಾಗಿದ್ದು, ವ್ಯವಸ್ಥಿತವಾಗಿ ವಿತರಿಸುವಲ್ಲಿಯೂ ಆಡಳಿತ ಮಂಡಳಿ ವಿಫಲವಾಗಿದೆ. ಇದರಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆಯಾಗುತ್ತಿದ್ದು, ಆಡಳಿತ ಮಂಡಳಿಯು ಈ ಬಗ್ಗೆ ಗಮನಹರಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಡೆದುಕೊಂಡು ದೇವಾಲಯದ ಸಿಬ್ಬಂದಿಗೆ ಭಕ್ತಾದಿಗಳೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಲಿ.

-ಭಾಸ್ಕರ್, ವಿ.ವಿ.ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago