ನೆರೆಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತ ಮತ್ತು ಭೀಕರ ಪ್ರವಾಹದಿಂದಾಗಿ ಅಪಾರ ಪ್ರಮಾಣದ ಸಾವು-ನೋವುಗಳು ಸಂಭವಿಸಿದ್ದು, ಎಲ್ಲರ ಮನಸ್ಸಿನಲ್ಲಿ ಇದೊಂದು ಕಹಿ ಘಟನೆಯಾಗಿ ಉಳಿದಿದೆ.
ಮನುಷ್ಯ ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ಒಡಲನ್ನು ಬಗೆದಷ್ಟೂ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ.
ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಆಗಾಗ್ಗೆ ಭೂಕುಸಿತಗಳು ಸಂಭವಿಸುವ ಮೂಲಕ ಪ್ರಕೃತಿ ಮನುಷ್ಯನಿಗೆ ಎಚ್ಚರಿಕೆ ನೀಡಿದರೂ ಎಚ್ಚೆತ್ತುಕೊಳ್ಳದೇ ಬೆಟ್ಟ-ಗುಡ್ಡಗಳನ್ನು ಕೊರೆದು ರಸ್ತೆಗಳನ್ನು ನಿರ್ಮಿಸಿದ್ದಲ್ಲದೇ ಕಾಡುಗಳನ್ನು ನಾಶ ಮಾಡಿ ನಗರಗಳನ್ನು ಸೃಷ್ಟಿಸಿದ ಪರಿಣಾಮ ವಯನಾಡಿನಲ್ಲಿ ಸಂಭವಿಸಿದಂತಹ ಮಹಾದುರಂತಗಳು ಸಂಭವಿಸುತ್ತಿವೆ. ಇಂತಹ ಘಟನೆಗಳಿಂದ ನಾವು ಎಚ್ಚೆತ್ತುಕೊಂಡು ಮುಂದಾದರೂ ಪರಿಸರ ಸಂರಕ್ಷಣೆಗೆ ಮುಂದಾಗೋಣ.
-ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…