Andolana originals

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ ನಂತರ ಸರದಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡುತ್ತಾರೆ.

೧,೧೦೧ ಮೆಟ್ಟಿಲುಗಳನ್ನು ಹತ್ತಿ ಸುಸ್ತಾಗಿರುತ್ತಾರೆ. ಆನಂತರ ಉದ್ದುದ್ದ ಸಾಲುಗಳಲ್ಲಿ ನಿಂತುಕೊಂಡು ಚಾಮುಂಡೇಶ್ವರಿ ತಾಯಿ ದರ್ಶನ ಮಾಡುತ್ತಾರೆ. ಎಷ್ಟೋ ಭಕ್ತಾದಿಗಳು ಕಷ್ಟಪಟ್ಟು ಮೆಟ್ಟಿಲುಗಳನ್ನು ಹತ್ತಿ ಭಕ್ತರ ಉದ್ದನೆಯ ಸಾಲುಗಳನ್ನು ನೋಡಿ ನನ್ನ ಕೈಲಿ ಇಷ್ಟೊಂದು ಕ್ಯೂ ಬಳಸಿಕೊಂಡು ಒಳಕ್ಕೆ ಹೋಗೊಕೆ ಆಗಲ್ಲ ಎಂದು ಹೊರಗಡೆನೇ ನಿಂತುಕೊಂಡು ಕೈಮುಗಿದು ಹೊರಟುಬಿಡು ವವರ ಸಂಖ್ಯೆಗೂ ಕಮ್ಮಿಯಿರುವುದಿಲ್ಲ. ಇಂತಹ ಭಕ್ತಾದಿಗಳಿಗೆ ನೇರ ದರ್ಶನ ವ್ಯವಸ್ಥೆ ಇದ್ದರೆ ದೇವಿಯ ದರ್ಶನ ಮಾಡಿ ಪುನೀತರಾಗುತ್ತಾರೆ.

ತಿರುಪತಿಯಲ್ಲಿರುವಂತೆ ಚಾಮುಂಡಿ ಬೆಟ್ಟದಲ್ಲಿಯೂ ಮೆಟ್ಟಿಲುಗಳ ಮೂಲಕ ಹತ್ತಿ ಬರುವ ಭಕ್ತಾದಿಗಳಿಗೆ ನೇರ ದರ್ಶನ ವ್ಯವಸ್ಥೆ ಮಾಡಿದರೆ ಅನುಕೂಲವಾಗುತ್ತದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಸ್ಥಳೀಯ ಜನಪ್ರತಿನಿಽಗಳು, ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಈ ಬಾರಿಯ ಆಷಾಢ ಶುಕ್ರವಾರಗಳಲ್ಲಿ ಮೆಟ್ಟಿಲುಗಳನ್ನು ಹತ್ತಿ ಬರುವ ಭಕ್ತಾದಿಗಳಿಗೆ ಚಾಮುಂಡೇಶ್ವರಿ ತಾಯಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.

-ಅಹಲ್ಯ ಸಿ.ನಾ. ಚಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago