Andolana originals

ಓದುಗರ ಪತ್ರ: ಬೇಸಿಗೆ ರಜೆ ಅರ್ಥಪೂರ್ಣವಾಗಿರಲಿ

೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.

ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್, ಟೀವಿ ಹಾಗೂ ಕಂಪ್ಯೂಟರ್ಗಳು ಪ್ರತಿ ಮನೆ, ಮನಗಳನ್ನು ಆವರಿಸಿವೆ. ಮಕ್ಕಳು ರಜಾ ಅವಧಿಯಲ್ಲಿ ಇವುಗಳ ಮುಂದೆ ಕೂತು ಗೇಮ್‌ಗಳನ್ನು ಆಡುತ್ತಾ ಮತ್ತಷ್ಟು ಮಾನಸಿಕ ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಇದು ತಪ್ಪ ಬೇಕು. ರಜಾ ಅವಧಿಯಲ್ಲಿ ಮಕ್ಕಳಿಗೆ ಒಳಾಂಗಣ ಕ್ರೀಡೆಗಳಿಗಿಂತ ಹೊರಾಂಗಣ ಕ್ರೀಡೆ ಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಗಾಳಿಪಟ ಆಡಿಸುವುದು, ಗೋಲಿ, ಗಜಗ, ಚಿನ್ನಿದಾಂಡು, ಸಂಬಂಧಿಕರ ಊರುಗಳಿಗೆ ಸುತ್ತಾಟ, ಅಜ್ಜ ಅಜ್ಜಿಯ ರಿಂದ ಕಥೆ ಕಲಿಯುವುದು, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿಕೆ, ಜಾತ್ರೆ ಹಾಗೂ ಉತ್ಸವಗಳಲ್ಲಿ ನಾಟಕವನ್ನು ನೋಡಿ ಸಂಭ್ರಮಿಸುವುದು…

ಈ ರೀತಿಯ ಹತ್ತು ಹಲವು ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳು ರಜಾ ಅವಧಿಯಲ್ಲಿ ಭಾಗಿಯಾದರೆ ಮಕ್ಕಳು ಒತ್ತಡ ರಹಿತವಾಗಿ, ಮೋಜಿನ ಜೊತೆ ರಜೆಯ ಮಜವನ್ನೂ ಅನುಭವಿಸಿದಂತಾಗುತ್ತದೆ. ಮಕ್ಕಳ ಚಿಂತನಾಲಹರಿ ಬದಲಾಗಿ ಅವರ ಜ್ಞಾನ ಮತ್ತಷ್ಟು ವಿಸ್ತಾರವಾಗುತ್ತದೆ. ಸ್ನೇಹ ಬಾಂಧವ್ಯ ಹೆಚ್ಚಾಗಿ ಮಕ್ಕಳ ಏಕಾಂಗಿತನ ದೂರವಾಗುತ್ತದೆ. ಇಷ್ಟೇ ಅಲ್ಲದೆ ಕೂಡು ಕುಟುಂಬದ ಜೊತೆ ಅನೇಕ ಸಂಬಂಧಿಕರ ಊರುಗಳಿಗೆ ಹೋಗುವುದರ ಪರಿಣಾಮ ವಿವಿಧ ಸ್ಥಳಗಳ ಪರಿಚಯ ಹಾಗೂ ವಿವಿಧ ಕುಟುಂಬಗಳ ಆರ್ಥಿಕ ಸ್ಥಿತಿಗತಿಗಳು ಮತ್ತು ಬದುಕಿನ ವೃತ್ತಿಗಳ ಅರಿವು ಮಕ್ಕಳಿಗೆ ಸಿಕ್ಕಂತಾಗುತ್ತದೆ. ಈ ರೀತಿ ಈ ಬಾರಿಯ ಬೇಸಿಗೆರಜಾ ಅವಧಿಯಲ್ಲಿ ಮಕ್ಕಳ ಮನಸ್ಸನ್ನು ಪ್ರ-ಲ್ಲಿತಗೊಳಿಸಲು ಪ್ರತಿಯೊಬ್ಬ ಪೋಷಕರೂ ಮುಂದಾಗಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

12 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

12 hours ago