ಓದುಗರ ಪತ್ರ
೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.
ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್, ಟೀವಿ ಹಾಗೂ ಕಂಪ್ಯೂಟರ್ಗಳು ಪ್ರತಿ ಮನೆ, ಮನಗಳನ್ನು ಆವರಿಸಿವೆ. ಮಕ್ಕಳು ರಜಾ ಅವಧಿಯಲ್ಲಿ ಇವುಗಳ ಮುಂದೆ ಕೂತು ಗೇಮ್ಗಳನ್ನು ಆಡುತ್ತಾ ಮತ್ತಷ್ಟು ಮಾನಸಿಕ ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಇದು ತಪ್ಪ ಬೇಕು. ರಜಾ ಅವಧಿಯಲ್ಲಿ ಮಕ್ಕಳಿಗೆ ಒಳಾಂಗಣ ಕ್ರೀಡೆಗಳಿಗಿಂತ ಹೊರಾಂಗಣ ಕ್ರೀಡೆ ಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಗಾಳಿಪಟ ಆಡಿಸುವುದು, ಗೋಲಿ, ಗಜಗ, ಚಿನ್ನಿದಾಂಡು, ಸಂಬಂಧಿಕರ ಊರುಗಳಿಗೆ ಸುತ್ತಾಟ, ಅಜ್ಜ ಅಜ್ಜಿಯ ರಿಂದ ಕಥೆ ಕಲಿಯುವುದು, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿಕೆ, ಜಾತ್ರೆ ಹಾಗೂ ಉತ್ಸವಗಳಲ್ಲಿ ನಾಟಕವನ್ನು ನೋಡಿ ಸಂಭ್ರಮಿಸುವುದು…
ಈ ರೀತಿಯ ಹತ್ತು ಹಲವು ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳು ರಜಾ ಅವಧಿಯಲ್ಲಿ ಭಾಗಿಯಾದರೆ ಮಕ್ಕಳು ಒತ್ತಡ ರಹಿತವಾಗಿ, ಮೋಜಿನ ಜೊತೆ ರಜೆಯ ಮಜವನ್ನೂ ಅನುಭವಿಸಿದಂತಾಗುತ್ತದೆ. ಮಕ್ಕಳ ಚಿಂತನಾಲಹರಿ ಬದಲಾಗಿ ಅವರ ಜ್ಞಾನ ಮತ್ತಷ್ಟು ವಿಸ್ತಾರವಾಗುತ್ತದೆ. ಸ್ನೇಹ ಬಾಂಧವ್ಯ ಹೆಚ್ಚಾಗಿ ಮಕ್ಕಳ ಏಕಾಂಗಿತನ ದೂರವಾಗುತ್ತದೆ. ಇಷ್ಟೇ ಅಲ್ಲದೆ ಕೂಡು ಕುಟುಂಬದ ಜೊತೆ ಅನೇಕ ಸಂಬಂಧಿಕರ ಊರುಗಳಿಗೆ ಹೋಗುವುದರ ಪರಿಣಾಮ ವಿವಿಧ ಸ್ಥಳಗಳ ಪರಿಚಯ ಹಾಗೂ ವಿವಿಧ ಕುಟುಂಬಗಳ ಆರ್ಥಿಕ ಸ್ಥಿತಿಗತಿಗಳು ಮತ್ತು ಬದುಕಿನ ವೃತ್ತಿಗಳ ಅರಿವು ಮಕ್ಕಳಿಗೆ ಸಿಕ್ಕಂತಾಗುತ್ತದೆ. ಈ ರೀತಿ ಈ ಬಾರಿಯ ಬೇಸಿಗೆರಜಾ ಅವಧಿಯಲ್ಲಿ ಮಕ್ಕಳ ಮನಸ್ಸನ್ನು ಪ್ರ-ಲ್ಲಿತಗೊಳಿಸಲು ಪ್ರತಿಯೊಬ್ಬ ಪೋಷಕರೂ ಮುಂದಾಗಬೇಕಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…