ಓದುಗರ ಪತ್ರ
ಮೈಸೂರು ನಗರಕ್ಕೆ ಮುಕುಟದಂತಿರುವ ಕರ್ನಾಟಕ ಕಲಾಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ದಸರಾ ಸಮಿತಿಯವರು ಅಲ್ಲಿಯೇ ಬಾಡೂಟ ಸೇವಿಸಿರುವುದು ಬೇಸರದ ಸಂಗತಿ. ಈ ಹಿಂದೆ ಕಲಾಮಂದಿರದಲ್ಲಿ ನಡೆದ — ಕಾರ್ಯಕ್ರಮವೊಂದರಲ್ಲಿ ಮಾಂಸದೂಟದ ವ್ಯವಸ್ಥೆ ಮಾಡಿದ್ದಾಗ ಮೈಸೂರಿನ ಅನೇಕ ಸಾಹಿತಿಗಳು, ಕಲಾವಿದರು, ರಂಗಕರ್ಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆಗ ಇಲ್ಲಿ ಯಾವುದೇ ರೀತಿಯ ಊಟದ ವ್ಯವಸ್ಥೆ ಮಾಡಬಾರದು. ಒಂದು ವೇಳೆ ಮಾಡಿದರೂ ಕಲಾಮಂದಿರದ ಹೊರಭಾಗದಲ್ಲಿ ಸಸ್ಯಾಹಾರಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿತ್ತು.
ಕಲಾಮಂದಿರಕ್ಕೆ ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಇಲ್ಲಿ ಮಾಂಸಾಹಾರ ಸೇವನೆ ಮಾಡುವುದು ಅಷ್ಟು ಸೂಕ್ತವಲ್ಲ ಎಂದು ಈ ನಿರ್ಧಾರ ಮಾಡಲಾಗಿತ್ತು. ಇದರ ಕನಿಷ್ಠ ಜ್ಞಾನವೂ ಇಲ್ಲದೆ ಕೆಲ ಅಧಿಕಾರಿಗಳು ಮಾಂಸಾಹಾರ ಸೇವನೆ ಮಾಡಿರುವುದು ತಪ್ಪು. ಅಧಿಕಾರಿಗಳಿಗೆ ತಾವು ಏನೇ ಮಾಡಿದರೂ ಯಾರೂ ಪ್ರಶ್ನಿಸುವುದಿಲ್ಲ ಎಂಬ ಉದ್ಧಟತನವಿರುತ್ತದೆ ಎಂಬುದು ಇಲ್ಲಿ ಎದ್ದುಕಾಣುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಕಲಾಮಂದಿರದ ಒಳಗೆ ಮಾಂಸಾಹಾರಸೇವನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…