Andolana originals

ಓದುಗರ ಪತ್ರ: ಕಲಾಮಂದಿರದಲ್ಲಿ ಮಾಂಸಾಹಾರ ಸೇವನೆ ಸಲ್ಲದು

ಮೈಸೂರು ನಗರಕ್ಕೆ ಮುಕುಟದಂತಿರುವ ಕರ್ನಾಟಕ ಕಲಾಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ದಸರಾ ಸಮಿತಿಯವರು ಅಲ್ಲಿಯೇ ಬಾಡೂಟ ಸೇವಿಸಿರುವುದು ಬೇಸರದ ಸಂಗತಿ. ಈ ಹಿಂದೆ ಕಲಾಮಂದಿರದಲ್ಲಿ ನಡೆದ — ಕಾರ್ಯಕ್ರಮವೊಂದರಲ್ಲಿ ಮಾಂಸದೂಟದ ವ್ಯವಸ್ಥೆ ಮಾಡಿದ್ದಾಗ ಮೈಸೂರಿನ ಅನೇಕ ಸಾಹಿತಿಗಳು, ಕಲಾವಿದರು, ರಂಗಕರ್ಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆಗ ಇಲ್ಲಿ ಯಾವುದೇ ರೀತಿಯ ಊಟದ ವ್ಯವಸ್ಥೆ ಮಾಡಬಾರದು. ಒಂದು ವೇಳೆ ಮಾಡಿದರೂ ಕಲಾಮಂದಿರದ ಹೊರಭಾಗದಲ್ಲಿ ಸಸ್ಯಾಹಾರಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿತ್ತು.
ಕಲಾಮಂದಿರಕ್ಕೆ ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಇಲ್ಲಿ ಮಾಂಸಾಹಾರ ಸೇವನೆ ಮಾಡುವುದು ಅಷ್ಟು ಸೂಕ್ತವಲ್ಲ ಎಂದು ಈ ನಿರ್ಧಾರ ಮಾಡಲಾಗಿತ್ತು. ಇದರ ಕನಿಷ್ಠ ಜ್ಞಾನವೂ ಇಲ್ಲದೆ ಕೆಲ ಅಧಿಕಾರಿಗಳು ಮಾಂಸಾಹಾರ ಸೇವನೆ ಮಾಡಿರುವುದು ತಪ್ಪು. ಅಧಿಕಾರಿಗಳಿಗೆ ತಾವು ಏನೇ ಮಾಡಿದರೂ ಯಾರೂ ಪ್ರಶ್ನಿಸುವುದಿಲ್ಲ ಎಂಬ ಉದ್ಧಟತನವಿರುತ್ತದೆ ಎಂಬುದು ಇಲ್ಲಿ ಎದ್ದುಕಾಣುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಕಲಾಮಂದಿರದ ಒಳಗೆ ಮಾಂಸಾಹಾರಸೇವನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

8 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

35 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago