ಓದುಗರ ಪತ್ರ
ಮೈಸೂರು ನಗರಕ್ಕೆ ಮುಕುಟದಂತಿರುವ ಕರ್ನಾಟಕ ಕಲಾಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ದಸರಾ ಸಮಿತಿಯವರು ಅಲ್ಲಿಯೇ ಬಾಡೂಟ ಸೇವಿಸಿರುವುದು ಬೇಸರದ ಸಂಗತಿ. ಈ ಹಿಂದೆ ಕಲಾಮಂದಿರದಲ್ಲಿ ನಡೆದ — ಕಾರ್ಯಕ್ರಮವೊಂದರಲ್ಲಿ ಮಾಂಸದೂಟದ ವ್ಯವಸ್ಥೆ ಮಾಡಿದ್ದಾಗ ಮೈಸೂರಿನ ಅನೇಕ ಸಾಹಿತಿಗಳು, ಕಲಾವಿದರು, ರಂಗಕರ್ಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆಗ ಇಲ್ಲಿ ಯಾವುದೇ ರೀತಿಯ ಊಟದ ವ್ಯವಸ್ಥೆ ಮಾಡಬಾರದು. ಒಂದು ವೇಳೆ ಮಾಡಿದರೂ ಕಲಾಮಂದಿರದ ಹೊರಭಾಗದಲ್ಲಿ ಸಸ್ಯಾಹಾರಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿತ್ತು.
ಕಲಾಮಂದಿರಕ್ಕೆ ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಇಲ್ಲಿ ಮಾಂಸಾಹಾರ ಸೇವನೆ ಮಾಡುವುದು ಅಷ್ಟು ಸೂಕ್ತವಲ್ಲ ಎಂದು ಈ ನಿರ್ಧಾರ ಮಾಡಲಾಗಿತ್ತು. ಇದರ ಕನಿಷ್ಠ ಜ್ಞಾನವೂ ಇಲ್ಲದೆ ಕೆಲ ಅಧಿಕಾರಿಗಳು ಮಾಂಸಾಹಾರ ಸೇವನೆ ಮಾಡಿರುವುದು ತಪ್ಪು. ಅಧಿಕಾರಿಗಳಿಗೆ ತಾವು ಏನೇ ಮಾಡಿದರೂ ಯಾರೂ ಪ್ರಶ್ನಿಸುವುದಿಲ್ಲ ಎಂಬ ಉದ್ಧಟತನವಿರುತ್ತದೆ ಎಂಬುದು ಇಲ್ಲಿ ಎದ್ದುಕಾಣುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಕಲಾಮಂದಿರದ ಒಳಗೆ ಮಾಂಸಾಹಾರಸೇವನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…