Andolana originals

ಓದುಗರ ಪತ್ರ: ಕಲಾಮಂದಿರದಲ್ಲಿ ಮಾಂಸಾಹಾರ ಸೇವನೆ ಸಲ್ಲದು

ಮೈಸೂರು ನಗರಕ್ಕೆ ಮುಕುಟದಂತಿರುವ ಕರ್ನಾಟಕ ಕಲಾಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ದಸರಾ ಸಮಿತಿಯವರು ಅಲ್ಲಿಯೇ ಬಾಡೂಟ ಸೇವಿಸಿರುವುದು ಬೇಸರದ ಸಂಗತಿ. ಈ ಹಿಂದೆ ಕಲಾಮಂದಿರದಲ್ಲಿ ನಡೆದ — ಕಾರ್ಯಕ್ರಮವೊಂದರಲ್ಲಿ ಮಾಂಸದೂಟದ ವ್ಯವಸ್ಥೆ ಮಾಡಿದ್ದಾಗ ಮೈಸೂರಿನ ಅನೇಕ ಸಾಹಿತಿಗಳು, ಕಲಾವಿದರು, ರಂಗಕರ್ಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆಗ ಇಲ್ಲಿ ಯಾವುದೇ ರೀತಿಯ ಊಟದ ವ್ಯವಸ್ಥೆ ಮಾಡಬಾರದು. ಒಂದು ವೇಳೆ ಮಾಡಿದರೂ ಕಲಾಮಂದಿರದ ಹೊರಭಾಗದಲ್ಲಿ ಸಸ್ಯಾಹಾರಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿತ್ತು.
ಕಲಾಮಂದಿರಕ್ಕೆ ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಇಲ್ಲಿ ಮಾಂಸಾಹಾರ ಸೇವನೆ ಮಾಡುವುದು ಅಷ್ಟು ಸೂಕ್ತವಲ್ಲ ಎಂದು ಈ ನಿರ್ಧಾರ ಮಾಡಲಾಗಿತ್ತು. ಇದರ ಕನಿಷ್ಠ ಜ್ಞಾನವೂ ಇಲ್ಲದೆ ಕೆಲ ಅಧಿಕಾರಿಗಳು ಮಾಂಸಾಹಾರ ಸೇವನೆ ಮಾಡಿರುವುದು ತಪ್ಪು. ಅಧಿಕಾರಿಗಳಿಗೆ ತಾವು ಏನೇ ಮಾಡಿದರೂ ಯಾರೂ ಪ್ರಶ್ನಿಸುವುದಿಲ್ಲ ಎಂಬ ಉದ್ಧಟತನವಿರುತ್ತದೆ ಎಂಬುದು ಇಲ್ಲಿ ಎದ್ದುಕಾಣುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಕಲಾಮಂದಿರದ ಒಳಗೆ ಮಾಂಸಾಹಾರಸೇವನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

1 hour ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

17 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

18 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

23 hours ago