Andolana originals

ಓದುಗರ ಪತ್ರ: ಕಲಾಮಂದಿರದಲ್ಲಿ ಮಾಂಸಾಹಾರ ಸೇವನೆ ಸಲ್ಲದು

ಮೈಸೂರು ನಗರಕ್ಕೆ ಮುಕುಟದಂತಿರುವ ಕರ್ನಾಟಕ ಕಲಾಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ದಸರಾ ಸಮಿತಿಯವರು ಅಲ್ಲಿಯೇ ಬಾಡೂಟ ಸೇವಿಸಿರುವುದು ಬೇಸರದ ಸಂಗತಿ. ಈ ಹಿಂದೆ ಕಲಾಮಂದಿರದಲ್ಲಿ ನಡೆದ — ಕಾರ್ಯಕ್ರಮವೊಂದರಲ್ಲಿ ಮಾಂಸದೂಟದ ವ್ಯವಸ್ಥೆ ಮಾಡಿದ್ದಾಗ ಮೈಸೂರಿನ ಅನೇಕ ಸಾಹಿತಿಗಳು, ಕಲಾವಿದರು, ರಂಗಕರ್ಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆಗ ಇಲ್ಲಿ ಯಾವುದೇ ರೀತಿಯ ಊಟದ ವ್ಯವಸ್ಥೆ ಮಾಡಬಾರದು. ಒಂದು ವೇಳೆ ಮಾಡಿದರೂ ಕಲಾಮಂದಿರದ ಹೊರಭಾಗದಲ್ಲಿ ಸಸ್ಯಾಹಾರಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿತ್ತು.
ಕಲಾಮಂದಿರಕ್ಕೆ ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಇಲ್ಲಿ ಮಾಂಸಾಹಾರ ಸೇವನೆ ಮಾಡುವುದು ಅಷ್ಟು ಸೂಕ್ತವಲ್ಲ ಎಂದು ಈ ನಿರ್ಧಾರ ಮಾಡಲಾಗಿತ್ತು. ಇದರ ಕನಿಷ್ಠ ಜ್ಞಾನವೂ ಇಲ್ಲದೆ ಕೆಲ ಅಧಿಕಾರಿಗಳು ಮಾಂಸಾಹಾರ ಸೇವನೆ ಮಾಡಿರುವುದು ತಪ್ಪು. ಅಧಿಕಾರಿಗಳಿಗೆ ತಾವು ಏನೇ ಮಾಡಿದರೂ ಯಾರೂ ಪ್ರಶ್ನಿಸುವುದಿಲ್ಲ ಎಂಬ ಉದ್ಧಟತನವಿರುತ್ತದೆ ಎಂಬುದು ಇಲ್ಲಿ ಎದ್ದುಕಾಣುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಕಲಾಮಂದಿರದ ಒಳಗೆ ಮಾಂಸಾಹಾರಸೇವನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

32 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago