ಓದುಗರ ಪತ್ರ
ಕೌಟುಂಬಿಕ ಕಲಹಗಳಿಗೆ ಸಂಬಂಧಿಸಿದಂತೆ ಪುರುಷರೂ ಕ್ರೌರ್ಯವನ್ನು ಅನುಭವಿಸುತ್ತಿದ್ದಾರೆ, ಕಷ್ಟಗಳನ್ನು ಎದುರಿಸಿದ್ದಾರೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಸಾಂವಿಧಾನಿಕ ಸಮಾನತೆಯ ಮೌಲ್ಯಗಳನ್ನು ಎತ್ತಿಹಿಡಿದಿರುವುದು ಶ್ಲಾಘನೀಯ.
ಮಹಿಳೆಯರು ಹೆಚ್ಚಾಗಿ ಪುರುಷರ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ ಎನ್ನುವ ಸತ್ಯವನ್ನು ಒಪ್ಪಿಕೊಳ್ಳುವ ಜತೆಗೆ ಪುರುಷರ ಮೇಲೂ ಕಿರುಕುಳಗಳಾಗುತ್ತಿವೆ ಎಂಬುದನ್ನೂ ನಾವು ಒಪ್ಪಿಕೊಳ್ಳಬೇಕಿದೆ. ಇತ್ತೀಚಿನ ದಿನಗಳಲ್ಲಿ ಪುರುಷರೂ ಶೋಷಣೆಗಳನ್ನು ಅನುಭವಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಎಲ್ಲ ಸರ್ಕಾರಗಳೂ ಮಹಿಳಾ ಸಬಲೀಕರಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ ಸರಿ. ಆದರೆ ಪುರುಷರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಸರ್ಕಾರ ಎಂದಾದರೂ ಗಮನಹರಿಸಿದೆಯೇ? ಅನೇಕ ಬಾರಿ ಇಂತಹ ಪ್ರಕರಣಗಳು ಸಮಾಜದ ಗಮನಕ್ಕೆ ಬರುವುದಿಲ್ಲ. ಆದರೆ ಈಗ ಹೈಕೋರ್ಟ್ ಈ ವಿಚಾರವನ್ನು ಪ್ರಸ್ತಾಪಿಸುವ ಮೂಲಕ, ಮಹಿಳೆಯರು ಮಾತ್ರ ಪುರುಷರ ಕ್ರೌರ್ಯಕ್ಕೆ ಬಲಿಯಾಗುತ್ತಿಲ್ಲ ಅಥವಾ ಶೋಷಣೆಯನ್ನು ಅನುಭವಿಸಿಲ್ಲ. ಬದಲಿಗೆ ಪುರುಷರೂ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ, ಕೆಲನಬಾರಿ ಶೋಷಣೆಗಳಿಗೆ ತುತ್ತಾಗಿದ್ದಾರೆ ಎಂದಿದೆ. ಆ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಮುಂದಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…