ಓದುಗರ ಪತ್ರ
ಕೌಟುಂಬಿಕ ಕಲಹಗಳಿಗೆ ಸಂಬಂಧಿಸಿದಂತೆ ಪುರುಷರೂ ಕ್ರೌರ್ಯವನ್ನು ಅನುಭವಿಸುತ್ತಿದ್ದಾರೆ, ಕಷ್ಟಗಳನ್ನು ಎದುರಿಸಿದ್ದಾರೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಸಾಂವಿಧಾನಿಕ ಸಮಾನತೆಯ ಮೌಲ್ಯಗಳನ್ನು ಎತ್ತಿಹಿಡಿದಿರುವುದು ಶ್ಲಾಘನೀಯ.
ಮಹಿಳೆಯರು ಹೆಚ್ಚಾಗಿ ಪುರುಷರ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ ಎನ್ನುವ ಸತ್ಯವನ್ನು ಒಪ್ಪಿಕೊಳ್ಳುವ ಜತೆಗೆ ಪುರುಷರ ಮೇಲೂ ಕಿರುಕುಳಗಳಾಗುತ್ತಿವೆ ಎಂಬುದನ್ನೂ ನಾವು ಒಪ್ಪಿಕೊಳ್ಳಬೇಕಿದೆ. ಇತ್ತೀಚಿನ ದಿನಗಳಲ್ಲಿ ಪುರುಷರೂ ಶೋಷಣೆಗಳನ್ನು ಅನುಭವಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಎಲ್ಲ ಸರ್ಕಾರಗಳೂ ಮಹಿಳಾ ಸಬಲೀಕರಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ ಸರಿ. ಆದರೆ ಪುರುಷರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಸರ್ಕಾರ ಎಂದಾದರೂ ಗಮನಹರಿಸಿದೆಯೇ? ಅನೇಕ ಬಾರಿ ಇಂತಹ ಪ್ರಕರಣಗಳು ಸಮಾಜದ ಗಮನಕ್ಕೆ ಬರುವುದಿಲ್ಲ. ಆದರೆ ಈಗ ಹೈಕೋರ್ಟ್ ಈ ವಿಚಾರವನ್ನು ಪ್ರಸ್ತಾಪಿಸುವ ಮೂಲಕ, ಮಹಿಳೆಯರು ಮಾತ್ರ ಪುರುಷರ ಕ್ರೌರ್ಯಕ್ಕೆ ಬಲಿಯಾಗುತ್ತಿಲ್ಲ ಅಥವಾ ಶೋಷಣೆಯನ್ನು ಅನುಭವಿಸಿಲ್ಲ. ಬದಲಿಗೆ ಪುರುಷರೂ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ, ಕೆಲನಬಾರಿ ಶೋಷಣೆಗಳಿಗೆ ತುತ್ತಾಗಿದ್ದಾರೆ ಎಂದಿದೆ. ಆ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಮುಂದಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್ ರವಿಕುಮಾರ್…
ಬೆಂಗಳೂರು: ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ…
ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ…
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ…