ಓದುಗರ ಪತ್ರ
ಕೌಟುಂಬಿಕ ಕಲಹಗಳಿಗೆ ಸಂಬಂಧಿಸಿದಂತೆ ಪುರುಷರೂ ಕ್ರೌರ್ಯವನ್ನು ಅನುಭವಿಸುತ್ತಿದ್ದಾರೆ, ಕಷ್ಟಗಳನ್ನು ಎದುರಿಸಿದ್ದಾರೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಸಾಂವಿಧಾನಿಕ ಸಮಾನತೆಯ ಮೌಲ್ಯಗಳನ್ನು ಎತ್ತಿಹಿಡಿದಿರುವುದು ಶ್ಲಾಘನೀಯ.
ಮಹಿಳೆಯರು ಹೆಚ್ಚಾಗಿ ಪುರುಷರ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ ಎನ್ನುವ ಸತ್ಯವನ್ನು ಒಪ್ಪಿಕೊಳ್ಳುವ ಜತೆಗೆ ಪುರುಷರ ಮೇಲೂ ಕಿರುಕುಳಗಳಾಗುತ್ತಿವೆ ಎಂಬುದನ್ನೂ ನಾವು ಒಪ್ಪಿಕೊಳ್ಳಬೇಕಿದೆ. ಇತ್ತೀಚಿನ ದಿನಗಳಲ್ಲಿ ಪುರುಷರೂ ಶೋಷಣೆಗಳನ್ನು ಅನುಭವಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಎಲ್ಲ ಸರ್ಕಾರಗಳೂ ಮಹಿಳಾ ಸಬಲೀಕರಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ ಸರಿ. ಆದರೆ ಪುರುಷರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಸರ್ಕಾರ ಎಂದಾದರೂ ಗಮನಹರಿಸಿದೆಯೇ? ಅನೇಕ ಬಾರಿ ಇಂತಹ ಪ್ರಕರಣಗಳು ಸಮಾಜದ ಗಮನಕ್ಕೆ ಬರುವುದಿಲ್ಲ. ಆದರೆ ಈಗ ಹೈಕೋರ್ಟ್ ಈ ವಿಚಾರವನ್ನು ಪ್ರಸ್ತಾಪಿಸುವ ಮೂಲಕ, ಮಹಿಳೆಯರು ಮಾತ್ರ ಪುರುಷರ ಕ್ರೌರ್ಯಕ್ಕೆ ಬಲಿಯಾಗುತ್ತಿಲ್ಲ ಅಥವಾ ಶೋಷಣೆಯನ್ನು ಅನುಭವಿಸಿಲ್ಲ. ಬದಲಿಗೆ ಪುರುಷರೂ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ, ಕೆಲನಬಾರಿ ಶೋಷಣೆಗಳಿಗೆ ತುತ್ತಾಗಿದ್ದಾರೆ ಎಂದಿದೆ. ಆ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಮುಂದಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…