Andolana originals

ಓದುಗರ ಪತ್ರ: ಋತು ಚಕ್ರ ರಜೆ ಸೌಲಭ್ಯ ಸ್ವಾಗತಾರ್ಹ

ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ ಬಹುತೇಕ ಪ್ರಜ್ಞಾವಂತರ ನಿರೀಕ್ಷೆಯಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ಋತು ಚಕ್ರ ರಜೆ ಸೌಲಭ್ಯ ಕಲ್ಪಿಸುವ ಕುರಿತು ತೆಗೆದುಕೊಂಡ ನಿರ್ಧಾರ ನಿಜಕ್ಕೂ ಸಂತಸ ತಂದಿದೆ. ಪ್ರತಿ ತಿಂಗಳು ಮಹಿಳೆಯರು ಮುಟ್ಟಿನ ಸಮಯದಲ್ಲೂ ಕೆಲಸ ಮಾಡುತ್ತಾರೆ.

ಆದರೆ ಆ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅಗತ್ಯವಿತ್ತು. ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತು ಚಕ್ರ ರಜೆ ನೀಡುವ ನೀತಿಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಧಾರ ನಿಜಕ್ಕೂ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿನಿಯರಿಗೂ ಮುಟ್ಟಿನ ರಜೆ ಸೌಲಭ್ಯ ಕಲ್ಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿ.

– ಎನ್.ಆಶಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

6 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

6 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

6 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

6 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

7 hours ago