ಓದುಗರ ಪತ್ರ
ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ ಬಹುತೇಕ ಪ್ರಜ್ಞಾವಂತರ ನಿರೀಕ್ಷೆಯಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ಋತು ಚಕ್ರ ರಜೆ ಸೌಲಭ್ಯ ಕಲ್ಪಿಸುವ ಕುರಿತು ತೆಗೆದುಕೊಂಡ ನಿರ್ಧಾರ ನಿಜಕ್ಕೂ ಸಂತಸ ತಂದಿದೆ. ಪ್ರತಿ ತಿಂಗಳು ಮಹಿಳೆಯರು ಮುಟ್ಟಿನ ಸಮಯದಲ್ಲೂ ಕೆಲಸ ಮಾಡುತ್ತಾರೆ.
ಆದರೆ ಆ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅಗತ್ಯವಿತ್ತು. ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತು ಚಕ್ರ ರಜೆ ನೀಡುವ ನೀತಿಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಧಾರ ನಿಜಕ್ಕೂ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿನಿಯರಿಗೂ ಮುಟ್ಟಿನ ರಜೆ ಸೌಲಭ್ಯ ಕಲ್ಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿ.
– ಎನ್.ಆಶಾ, ಬೆಂಗಳೂರು
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…