Andolana originals

ಓದುಗರ ಪತ್ರ: ಋತು ಚಕ್ರ ರಜೆ ಸೌಲಭ್ಯ ಸ್ವಾಗತಾರ್ಹ

ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ ಬಹುತೇಕ ಪ್ರಜ್ಞಾವಂತರ ನಿರೀಕ್ಷೆಯಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ಋತು ಚಕ್ರ ರಜೆ ಸೌಲಭ್ಯ ಕಲ್ಪಿಸುವ ಕುರಿತು ತೆಗೆದುಕೊಂಡ ನಿರ್ಧಾರ ನಿಜಕ್ಕೂ ಸಂತಸ ತಂದಿದೆ. ಪ್ರತಿ ತಿಂಗಳು ಮಹಿಳೆಯರು ಮುಟ್ಟಿನ ಸಮಯದಲ್ಲೂ ಕೆಲಸ ಮಾಡುತ್ತಾರೆ.

ಆದರೆ ಆ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅಗತ್ಯವಿತ್ತು. ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತು ಚಕ್ರ ರಜೆ ನೀಡುವ ನೀತಿಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಧಾರ ನಿಜಕ್ಕೂ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿನಿಯರಿಗೂ ಮುಟ್ಟಿನ ರಜೆ ಸೌಲಭ್ಯ ಕಲ್ಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿ.

– ಎನ್.ಆಶಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

57 mins ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

1 hour ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

1 hour ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

1 hour ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

1 hour ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

1 hour ago