ಓದುಗರ ಪತ್ರ
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. ಸಾರಿಗೆ ನಿಗಮದ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿ ಹಾಕಲು ಸಾಮಾನ್ಯ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವುದು ಎಷ್ಟು ಸರಿ? ಈಗಾಗಲೇ ಇಂಧನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಮಧ್ಯಮ ವರ್ಗದ ಜನರಿಗೆ ಮೆಟ್ರೋ ಪ್ರಯಾಣ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಿದೆ. ಸಾರ್ವಜನಿಕ ಸಾರಿಗೆಯು ಲಾಭದಾಯಕ ಉದ್ದಿಮೆಯಾಗುವ ಮೊದಲು ಜನಸ್ನೇಹಿಯಾಗಬೇಕಿದೆ. ಸರ್ಕಾರವು ಕೂಡಲೇ ಈ ಪ್ರಸ್ತಾವನೆಯನ್ನು ಹಿಂಪಡೆದು ಜನಸಾಮಾನ್ಯರ ಹಿತ ಕಾಯಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…