ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಸಾಲ ಪಡೆದವರಿಗೆ ಬೆದರಿಕೆ ಹಾಕುವುದು, ಮನೆಯ ಬಳಿ ಗಲಾಟೆ ಮಾಡಿ ಅವಾಚ್ಯವಾಗಿ ನಿಂದಿಸಿ ವಸೂಲಾತಿಗೆ ಮುಂದಾಗುತ್ತಿದ್ದಾರೆ. ಅಲ್ಲದೆ ಮಹಿಳೆಯರೊಂದಿಗೂ ಅಗೌರವದಿಂದ ವರ್ತಿಸುತ್ತಿದ್ದು, ಅಶ್ಲೀಲ ಪದ ಬಳಕೆ ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ಸಾಲಗಾರರು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅರಿತುಕೊಳ್ಳಬೇಕು. ಸದ್ಯ ರಾಜ್ಯದಲ್ಲಿ ಮ್ರೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಹೆದರಿ ಜನರು ಗ್ರಾಮಗಳನ್ನು ತೊರೆದಿರುವ ಇನ್ನೂ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಈ ಸಮಸ್ಯೆ ಬಗೆಹರಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಧರಿಸಿದ್ದು, ಇದು ಒಳ್ಳೆಯ ಬೆಳವಣಿಗೆ. ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಮೈಕ್ರೋ ಫೈನಾನ್ಸ್ ಕಂಪೆನಿಗಳು ಚಾಚೂ ತಪ್ಪದೆ ಪಾಲಿಸುವ ಜತಗೆ ಆರ್ಬಿಐ ಗೈಡ್ಲೈನ್ಸ್ ಗಳನ್ನು ಗಮನದಲ್ಲಿಟ್ಟುಕೊಂಡು ಸಾಲ ವಸೂಲಾತಿ ಮಾಡಲಿ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…