ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಸಾಲ ಪಡೆದವರಿಗೆ ಬೆದರಿಕೆ ಹಾಕುವುದು, ಮನೆಯ ಬಳಿ ಗಲಾಟೆ ಮಾಡಿ ಅವಾಚ್ಯವಾಗಿ ನಿಂದಿಸಿ ವಸೂಲಾತಿಗೆ ಮುಂದಾಗುತ್ತಿದ್ದಾರೆ. ಅಲ್ಲದೆ ಮಹಿಳೆಯರೊಂದಿಗೂ ಅಗೌರವದಿಂದ ವರ್ತಿಸುತ್ತಿದ್ದು, ಅಶ್ಲೀಲ ಪದ ಬಳಕೆ ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ಸಾಲಗಾರರು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅರಿತುಕೊಳ್ಳಬೇಕು. ಸದ್ಯ ರಾಜ್ಯದಲ್ಲಿ ಮ್ರೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಹೆದರಿ ಜನರು ಗ್ರಾಮಗಳನ್ನು ತೊರೆದಿರುವ ಇನ್ನೂ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಈ ಸಮಸ್ಯೆ ಬಗೆಹರಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಧರಿಸಿದ್ದು, ಇದು ಒಳ್ಳೆಯ ಬೆಳವಣಿಗೆ. ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಮೈಕ್ರೋ ಫೈನಾನ್ಸ್ ಕಂಪೆನಿಗಳು ಚಾಚೂ ತಪ್ಪದೆ ಪಾಲಿಸುವ ಜತಗೆ ಆರ್ಬಿಐ ಗೈಡ್ಲೈನ್ಸ್ ಗಳನ್ನು ಗಮನದಲ್ಲಿಟ್ಟುಕೊಂಡು ಸಾಲ ವಸೂಲಾತಿ ಮಾಡಲಿ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…