Andolana originals

ಓದುಗರ ಪತ್ರ: ಮೈಕ್ರೋ ಫೈನಾನ್ ಕಂಪೆನಿಗಳು ನಿಯಮಗಳನ್ನು ಪಾಲಿಸಲಿ

ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಸಾಲ ಪಡೆದವರಿಗೆ ಬೆದರಿಕೆ ಹಾಕುವುದು, ಮನೆಯ ಬಳಿ ಗಲಾಟೆ ಮಾಡಿ ಅವಾಚ್ಯವಾಗಿ ನಿಂದಿಸಿ ವಸೂಲಾತಿಗೆ ಮುಂದಾಗುತ್ತಿದ್ದಾರೆ. ಅಲ್ಲದೆ ಮಹಿಳೆಯರೊಂದಿಗೂ ಅಗೌರವದಿಂದ ವರ್ತಿಸುತ್ತಿದ್ದು, ಅಶ್ಲೀಲ ಪದ ಬಳಕೆ ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ಸಾಲಗಾರರು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅರಿತುಕೊಳ್ಳಬೇಕು. ಸದ್ಯ ರಾಜ್ಯದಲ್ಲಿ ಮ್ರೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಹೆದರಿ ಜನರು ಗ್ರಾಮಗಳನ್ನು ತೊರೆದಿರುವ ಇನ್ನೂ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಈ ಸಮಸ್ಯೆ ಬಗೆಹರಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಧರಿಸಿದ್ದು, ಇದು ಒಳ್ಳೆಯ ಬೆಳವಣಿಗೆ. ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಮೈಕ್ರೋ ಫೈನಾನ್ಸ್ ಕಂಪೆನಿಗಳು ಚಾಚೂ ತಪ್ಪದೆ ಪಾಲಿಸುವ ಜತಗೆ ಆರ್‌ಬಿಐ ಗೈಡ್‌ಲೈನ್ಸ್ ಗಳನ್ನು ಗಮನದಲ್ಲಿಟ್ಟುಕೊಂಡು ಸಾಲ ವಸೂಲಾತಿ ಮಾಡಲಿ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

54 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

60 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

18 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

20 hours ago