ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ ಹುದ್ದೆ ಭರ್ತಿಯಲ್ಲೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕೆಂಬ ವಿಚಾರ ಚರ್ಚೆ ಹಂತದಲ್ಲಿದೆ ಎಂದು ತಿಳಿಸಿರುವುದು ಶ್ಲಾಘನೀಯ. ರಾಜ್ಯದ ೫೧ ರೈಲು ನಿಲ್ದಾಣಗಳನ್ನು ೧,೯೦೦ ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು. ಈಗಾಗಲೇ ೨೩ ನಿಲ್ದಾಣಗಳ ಕಾಮಗಾರಿ ಕೈಗೊಳ್ಳಲು ಸಿದ್ಧತೆ ನಡೆದಿದೆ ಎಂದು ತಿಳಿಸಿದ್ದಾರೆ. ರಾಜ್ಯದ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ.
-ಕೃಷ್ಣ ಹೆಗಡೆ, ರಾಜರಾಜೇಶ್ವರಿ ನಗರ, ಮೈಸೂರು





