Andolana originals

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ೧೯ ಶಾಸಕರ ಪೈಕಿ ಎಂಟು ಜನರು ಇದೇ ಮೊದಲ ಬಾರಿಗೆ ಅವಕಾಶ ಪಡೆದವರು. ಉಳಿದ ೧೧ ಮಂದಿ ಬೇರೆ ಬೇರೆ ಸರ್ಕಾರಗಳಲ್ಲಿ ಸಚಿವರಾಗಿದ್ದವರು.

ಆದರೆ ಮೈಸೂರು ಭಾಗಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗ ಯತೀಂದ್ರ ಸಿದ್ದರಾಮಯ್ಯನವರನ್ನು ಹೊರತುಪಡಿಸಿದರೆ ಹಿಂದಿನ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ನಿಭಾಯಿಸಿದ ಹಿರಿಯರಾದ ಡಾ. ಹೆಚ್. ಸಿ. ಮಹದೇವಪ್ಪ ಅವರಿಗಾಗಲೀ , ಮೈಸೂರು ನಗರದ ಮತ್ತೊಬ್ಬ ಹಿರಿಯರಾದ ಮತ್ತು ೨೦೦೨ರಿಂದ ೨೦೨೩ರರವರೆಗೂ ಸೋಲಿಲ್ಲದ ಸರದಾರನಾಗಿ ಗೆದ್ದು ಬಂದಂತಹ ಹಾಗೂ ಹಿಂದೆ ಕಾರ್ಮಿಕರ ಖಾತೆಯನ್ನು ನಿಭಾಯಿಸಿರುವ ಅನುಭವಿ ರಾಜಕಾರಣಿ ತನ್ವೀರ್ ಸೇಠ್ ಅವರಿಗಾಗಲೀ ಈ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕದೇ ಇರುವುದು ಮೈಸೂರಿನ ಹಿರಿಯ ಜನಪ್ರತಿನಿಧಿಗಳನ್ನು ಕಡೆಗಣಿಸಿದಂತಾಗಿದೆ. ಹೀಗಾಗಬಾರದಿತ್ತು.

-ಪಿ. ಸಿ. ಕಂಗಾಣಿ ಸೋಮು, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 mins ago

ಓದುಗರ ಪತ್ರ: ತಂತ್ರಜ್ಞಾನಾಧಾರಿತ ನ್ಯೂಟ್ರಿ ಸ್ಕೋರ್ ಜಾರಿಗೆ ತನ್ನಿ

ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು…

5 mins ago

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago