Andolana originals

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ ನಿಯಮದ ಕಾನೂನು ಅಡಿಯಲ್ಲಿ ಶಿಕ್ಷೆ ಪ್ರಮಾಣವನ್ನು ಉಲ್ಲೇಖಿಸಿದ್ದರೂ ಇದೆಲ್ಲವನ್ನೂ ಮರೆತು ದ್ವಿಚಕ್ರ ವಾಹನ ಸವಾರರು ತಮ್ಮ ಬೈಕ್‌ಗಳು ಆಕರ್ಷಿತವಾಗಿ ಕಾಣಬೇಕೆಂದು ದರ್ಪಣವನ್ನು ಎರಡೂ ಕಡೆಯಲ್ಲೂ ತೆಗೆದುಹಾಕಿ ವಾಹನವನ್ನು ಚಾಲನೆ ಮಾಡುವುದಲ್ಲದೆ, ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಸವಾರರಿಗೂ ತೊಂದರೆ ಕೊಡುತ್ತಾರೆ. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿವೆ.
ತಮ್ಮ ದ್ವಿಚಕ್ರ ವಾಹನಗಳ ದರ್ಪಣ ತೆಗೆದರೆ, ಅದರಿಂದ ಅಡ್ಡ ಪರಿಣಾಮಗಳು ಉಂಟಾಗುತ್ತವೆ ಎಂಬ ಅರಿವಿದ್ದರೂ ಇಂತಹ ತಪ್ಪುಗಳನ್ನು ಮಾಡಿ ಮತ್ತೊಬ್ಬರ ಪ್ರಾಣ ಹಾನಿಗೆ ಕಾರಣರಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬ ದ್ವಿಚಕ್ರ ವಾಹನ ಚಾಲಕರೂ ಕಡ್ಡಾಯವಾಗಿ ವಾಹನಗಳಿಗೆ ಎಡಭಾಗ ಮತ್ತು ಬಲಭಾಗದಲ್ಲಿ ದರ್ಪಣ ಅಳವಡಿಕೆ ಮಾಡುವುದನ್ನು ಕಡ್ಡಾಯಗೊಳಿಸಲು ಪೊಲೀಸ್ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿದೆ.

– ಬಿ.ಎಸ್.ಸಾಯಿ ಸಂದೇಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

1 min ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

4 mins ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

6 mins ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

8 mins ago

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

13 hours ago