Andolana originals

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ ನಿಯಮದ ಕಾನೂನು ಅಡಿಯಲ್ಲಿ ಶಿಕ್ಷೆ ಪ್ರಮಾಣವನ್ನು ಉಲ್ಲೇಖಿಸಿದ್ದರೂ ಇದೆಲ್ಲವನ್ನೂ ಮರೆತು ದ್ವಿಚಕ್ರ ವಾಹನ ಸವಾರರು ತಮ್ಮ ಬೈಕ್‌ಗಳು ಆಕರ್ಷಿತವಾಗಿ ಕಾಣಬೇಕೆಂದು ದರ್ಪಣವನ್ನು ಎರಡೂ ಕಡೆಯಲ್ಲೂ ತೆಗೆದುಹಾಕಿ ವಾಹನವನ್ನು ಚಾಲನೆ ಮಾಡುವುದಲ್ಲದೆ, ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಸವಾರರಿಗೂ ತೊಂದರೆ ಕೊಡುತ್ತಾರೆ. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿವೆ.
ತಮ್ಮ ದ್ವಿಚಕ್ರ ವಾಹನಗಳ ದರ್ಪಣ ತೆಗೆದರೆ, ಅದರಿಂದ ಅಡ್ಡ ಪರಿಣಾಮಗಳು ಉಂಟಾಗುತ್ತವೆ ಎಂಬ ಅರಿವಿದ್ದರೂ ಇಂತಹ ತಪ್ಪುಗಳನ್ನು ಮಾಡಿ ಮತ್ತೊಬ್ಬರ ಪ್ರಾಣ ಹಾನಿಗೆ ಕಾರಣರಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬ ದ್ವಿಚಕ್ರ ವಾಹನ ಚಾಲಕರೂ ಕಡ್ಡಾಯವಾಗಿ ವಾಹನಗಳಿಗೆ ಎಡಭಾಗ ಮತ್ತು ಬಲಭಾಗದಲ್ಲಿ ದರ್ಪಣ ಅಳವಡಿಕೆ ಮಾಡುವುದನ್ನು ಕಡ್ಡಾಯಗೊಳಿಸಲು ಪೊಲೀಸ್ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿದೆ.

– ಬಿ.ಎಸ್.ಸಾಯಿ ಸಂದೇಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

2 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

3 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

3 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

4 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

5 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

5 hours ago