Andolana originals

ಓದುಗರ ಪತ್ರ: ಮಕ್ಕಳ ದುರುಪಯೋಗ ಇನ್ನಾದರೂ ನಿಲ್ಲಲಿ

ಅಪ್ರಾಪ್ತ ವಯಸ್ಸಿನ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು, ವೀಕ್ಷಿಸುವುದು, ಹಂಚಿಕೊಳ್ಳುವುದು ಮಾತ್ರವಲ್ಲದೆ ಅವುಗಳನ್ನು ಯಾವುದೇ ಡಿಜಿಟಲ್ ಸಾಧನಗಳಲ್ಲಿ ಶೇಖರಿಸಿಟ್ಟುಕೊಳ್ಳುವುದೂ ಪೋಕ್ಸೊ ಕಾಯಿದೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹ.

ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದು, ಲೈಂಗಿಕ ಆಸಕ್ತಿಗಳನ್ನು ಅವರಲ್ಲಿ ಬಿಂಬಿಸಿ ಅವುಗಳನ್ನು ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣ ಹಾಗೂ ಇತರೆ ಫೋರ್ನ್ ವೆಬ್‌ಸೈಟ್‌ಗಳಲ್ಲಿ ಹಂಚುವುದು ನಿಜಕ್ಕೂ ಬಹುದೊಡ್ಡ ಅಪರಾಧ. ಮಕ್ಕಳ ಮೇಲೆ ಎಸಗುವ ಲೈಂಗಿಕ ದೌರ್ಜನ್ಯಗಳು ಅವರಲ್ಲಿ ಸೈಕೋಪಥಾಲಜಿ ಸೇರಿದಂತೆ ಅಲ್ಪಾವಧಿಯ ಮತ್ತು ದೀರ್ಘಾವಧಿಯ ಪರಿಣಾಮಗಳನ್ನು ಬೀರುತ್ತವೆ. ಖಿನ್ನತೆ, ಆತಂಕ, ಅಸ್ವಸ್ಥತೆ, ನಿದ್ರಾಭಂಗ ಸೇರಿದಂತೆ ಅವರು ಆಘಾತದಲ್ಲಿಯೇ ಬದುಕು ದೂಡುವಂತಾಗಬಹುದು.

ಅಲ್ಲದೆ ಆ ಮಗು ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು ಬದುಕಲು ಹಿಂಜರಿಯುವಂತೆ ಮಾಡಿರುತ್ತದೆ. ಅಲ್ಲದೆ ಮಕ್ಕಳ ದೈಹಿಕ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರಿ ಅವರು ವಿವಿಧ ಸೋಂಕುಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ದುರುಳರಿಗೆ ಕಾನೂನಿನಡಿ ತಕ್ಕ ಶಿಕ್ಷೆ ಆಗಲೇಬೇಕಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಉತ್ತಮವಾದ ತೀರ್ಪನ್ನೇ ನೀಡಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

34 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago