Andolana originals

ಓದುಗರ ಪತ್ರ: ಮಕ್ಕಳ ದುರುಪಯೋಗ ಇನ್ನಾದರೂ ನಿಲ್ಲಲಿ

ಅಪ್ರಾಪ್ತ ವಯಸ್ಸಿನ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು, ವೀಕ್ಷಿಸುವುದು, ಹಂಚಿಕೊಳ್ಳುವುದು ಮಾತ್ರವಲ್ಲದೆ ಅವುಗಳನ್ನು ಯಾವುದೇ ಡಿಜಿಟಲ್ ಸಾಧನಗಳಲ್ಲಿ ಶೇಖರಿಸಿಟ್ಟುಕೊಳ್ಳುವುದೂ ಪೋಕ್ಸೊ ಕಾಯಿದೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹ.

ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದು, ಲೈಂಗಿಕ ಆಸಕ್ತಿಗಳನ್ನು ಅವರಲ್ಲಿ ಬಿಂಬಿಸಿ ಅವುಗಳನ್ನು ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣ ಹಾಗೂ ಇತರೆ ಫೋರ್ನ್ ವೆಬ್‌ಸೈಟ್‌ಗಳಲ್ಲಿ ಹಂಚುವುದು ನಿಜಕ್ಕೂ ಬಹುದೊಡ್ಡ ಅಪರಾಧ. ಮಕ್ಕಳ ಮೇಲೆ ಎಸಗುವ ಲೈಂಗಿಕ ದೌರ್ಜನ್ಯಗಳು ಅವರಲ್ಲಿ ಸೈಕೋಪಥಾಲಜಿ ಸೇರಿದಂತೆ ಅಲ್ಪಾವಧಿಯ ಮತ್ತು ದೀರ್ಘಾವಧಿಯ ಪರಿಣಾಮಗಳನ್ನು ಬೀರುತ್ತವೆ. ಖಿನ್ನತೆ, ಆತಂಕ, ಅಸ್ವಸ್ಥತೆ, ನಿದ್ರಾಭಂಗ ಸೇರಿದಂತೆ ಅವರು ಆಘಾತದಲ್ಲಿಯೇ ಬದುಕು ದೂಡುವಂತಾಗಬಹುದು.

ಅಲ್ಲದೆ ಆ ಮಗು ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು ಬದುಕಲು ಹಿಂಜರಿಯುವಂತೆ ಮಾಡಿರುತ್ತದೆ. ಅಲ್ಲದೆ ಮಕ್ಕಳ ದೈಹಿಕ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರಿ ಅವರು ವಿವಿಧ ಸೋಂಕುಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ದುರುಳರಿಗೆ ಕಾನೂನಿನಡಿ ತಕ್ಕ ಶಿಕ್ಷೆ ಆಗಲೇಬೇಕಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಉತ್ತಮವಾದ ತೀರ್ಪನ್ನೇ ನೀಡಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago