Andolana originals

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ ಸಿಕ್ಕ ಅಮೂಲ್ಯ ಅವಕಾಶವನ್ನು ಸದ್ವಿನಿಯೋಗ ಮಾಡಿಕೊಂಡು ಜನಪರ ಸೇವೆ ಮಾಡುತ್ತಿರುವ ದರ್ಶನ್ ಧ್ರುವನಾರಾಯಣ ಅವರು ಉತ್ತಮ ಉದಾಹರಣೆ..!

ಪ್ರಾಚೀನ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ನಂಜನಗೂಡು ಪಟ್ಟಣದ ಮೂಲ ಹೆಸರು ಗರಳಪುರಿ. ಇತಿಹಾಸದ ಪುಟವನ್ನು ಈಗ ತೆರೆದು ಸಂಭ್ರಮಿಸಿತು. ಇದರ ಹಿಂದಿನ ಕರ್ತೃ ಸ್ಥಳೀಯ ಶಾಸಕರು.ಇವರ ಅಪಾರ ಇಚ್ಛಾಶಕ್ತಿ, ಪ್ರತ್ಯೇಕವಾದ ಚಿಂತನೆ ಯಿಂದಾಗಿ ಸಾಂಸ್ಕೃತಿಕ ಕಲಾವೈಭವದ ಮೆರುಗು ಗರಳಪುರಿ ಉತ್ಸವ ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮೀ ಜತ್ರಾ ಮಹೋತ್ಸವದ ಪ್ರಯುಕ್ತ.. ಇದೇ ಮೊದಲ ಬಾರಿಗೆ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಆರಂಭ ವಾಗುವ ಮುಖೇನ ಹೊಸ ರೂಪ ಪಡೆದಿದೆ. ಈ ಕ್ಷೇತ್ರದ ಅವಲೋಕನ ಮಾಡಿದರೆ,ಬಹುಶಃ ಈ ಹಿಂದಿನ ಅವಧಿಗಳಲ್ಲಿ ನಂಜನಗೂಡಿನ ಶಾಸಕರಾಗಿದ್ದವರು, ಮಂತ್ರಿಗಳಾಗಿದ್ದವರು, ಯಾರೂ ಕೂಡ ಯೋಚಿಸದ ವಿಭಿನ್ನ ಮಾದರಿಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿಯ ಪಂಚರಥೋತ್ಸವಕ್ಕೆ ಭಕ್ತಿ, ಪರಂಪರೆ, ವೈಭವದ ಹೊಸ ಮೆರುಗು ತಂದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ.

ಸುಮಾರು ೯ ದಿನಗಳ ಕಾಲ ಪಟ್ಟಣದಲ್ಲಿ ನಡೆದ ೧೫ ಕ್ಕೂ ಹೆಚ್ಚು ಸ್ಪರ್ಧೆಗಳು ಕಲಾ ರಸಿಕರನ್ನು ತನ್ನತ್ತ ಕೈ ಬೀಸಿ ಆಕರ್ಷಿಸಿತು. ಇಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯದ ಹಲವಾರು ಜಿಗಳ ಸಾಕಷ್ಟು ಸ್ಪರ್ಧಾ ಆಕಾಂಕ್ಷಿಗಳು ಆಗಮಿಸಿ ಭಾಗವಹಿಸಿ ಹರ್ಷ ವ್ಯಕ್ತಪಡಿಸಿದರು. ಉತ್ಸವದ ಸಮಾರೋಪ ಸಮಾರಂಭಕ್ಕೆ ನಾಡಿನ ಖ್ಯಾತ ಚಲನಚಿತ್ರ ತಾರೆಯರು ಆಗಮಿಸುವ ಮೂಲಕ ಕಾರ್ಯಕ್ರಮಕ್ಕೆ ಇನ್ನಷ್ಟು ರಂಗು ಹೆಚ್ಚಿಸಿದರು.

ಮೈಸೂರು ದಸರಾ, ಕನಕಪುರದ ಕನ ಕೋತ್ಸವ, ಬೆಂಗಳೂರಿನ ಕರಗ ಉತ್ಸವ, ಐತಿಹಾಸಿಕ ಹಂಪಿ ಉತ್ಸವ, ಕರಾವಳಿಯ ಕಂಬಳ, ಪಟ್ಟದಕಲ್ಲು ನೃತ್ಯೋತ್ಸವ, ದಕ್ಷಿಣ ಕನ್ನಡ ಜಿಯ ಕಂಬಳ, ಇದೇ ಸಾಲಿಗೆ ಸದ್ಯ ನಂಜನಗೂಡಿನಲ್ಲಿ ನಡೆದ ಗರಳಪುರಿ ಉತ್ಸವ ತನ್ಮೂಲಕ ರಾಜ್ಯದ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಗ್ರಾಮೀಣ ಕಲೆಗಳನ್ನು ಪ್ರತಿಬಿಂಬಿಸುತ್ತ ಇತಿಹಾಸದ ಪುಟ ಸೇರುತ್ತಿದೆ. ಸರ್ವರ ಸಾಮರಸ್ಯದ ಬೀಡಾದ ನಂಜನಗೂಡಿನಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಿದೆ. ಶಾಸಕ ದರ್ಶನ್ ಧ್ರುವನಾರಾಯಣ್ ತಮ್ಮ ತಂದೆ ಮಾಜಿ ಸಂಸದ ಅಭಿವೃದ್ಧಿ ಹರಿಕಾರರಾಗಿದ್ದ ದಿ.ಧ್ರುವನಾರಾಯಣ ಅವರ ಹಾದಿಯಲ್ಲಿ ಉತ್ಸಾಹಿಯಾಗಿ ಮುನ್ನುಗ್ಗುತ್ತಿರುವುದು ಅತ್ಯಂತ ಗೌರವದ ವಿಚಾರ.

 -ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

25 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago