Andolana originals

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ ಸಿಕ್ಕ ಅಮೂಲ್ಯ ಅವಕಾಶವನ್ನು ಸದ್ವಿನಿಯೋಗ ಮಾಡಿಕೊಂಡು ಜನಪರ ಸೇವೆ ಮಾಡುತ್ತಿರುವ ದರ್ಶನ್ ಧ್ರುವನಾರಾಯಣ ಅವರು ಉತ್ತಮ ಉದಾಹರಣೆ..!

ಪ್ರಾಚೀನ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ನಂಜನಗೂಡು ಪಟ್ಟಣದ ಮೂಲ ಹೆಸರು ಗರಳಪುರಿ. ಇತಿಹಾಸದ ಪುಟವನ್ನು ಈಗ ತೆರೆದು ಸಂಭ್ರಮಿಸಿತು. ಇದರ ಹಿಂದಿನ ಕರ್ತೃ ಸ್ಥಳೀಯ ಶಾಸಕರು.ಇವರ ಅಪಾರ ಇಚ್ಛಾಶಕ್ತಿ, ಪ್ರತ್ಯೇಕವಾದ ಚಿಂತನೆ ಯಿಂದಾಗಿ ಸಾಂಸ್ಕೃತಿಕ ಕಲಾವೈಭವದ ಮೆರುಗು ಗರಳಪುರಿ ಉತ್ಸವ ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮೀ ಜತ್ರಾ ಮಹೋತ್ಸವದ ಪ್ರಯುಕ್ತ.. ಇದೇ ಮೊದಲ ಬಾರಿಗೆ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಆರಂಭ ವಾಗುವ ಮುಖೇನ ಹೊಸ ರೂಪ ಪಡೆದಿದೆ. ಈ ಕ್ಷೇತ್ರದ ಅವಲೋಕನ ಮಾಡಿದರೆ,ಬಹುಶಃ ಈ ಹಿಂದಿನ ಅವಧಿಗಳಲ್ಲಿ ನಂಜನಗೂಡಿನ ಶಾಸಕರಾಗಿದ್ದವರು, ಮಂತ್ರಿಗಳಾಗಿದ್ದವರು, ಯಾರೂ ಕೂಡ ಯೋಚಿಸದ ವಿಭಿನ್ನ ಮಾದರಿಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿಯ ಪಂಚರಥೋತ್ಸವಕ್ಕೆ ಭಕ್ತಿ, ಪರಂಪರೆ, ವೈಭವದ ಹೊಸ ಮೆರುಗು ತಂದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ.

ಸುಮಾರು ೯ ದಿನಗಳ ಕಾಲ ಪಟ್ಟಣದಲ್ಲಿ ನಡೆದ ೧೫ ಕ್ಕೂ ಹೆಚ್ಚು ಸ್ಪರ್ಧೆಗಳು ಕಲಾ ರಸಿಕರನ್ನು ತನ್ನತ್ತ ಕೈ ಬೀಸಿ ಆಕರ್ಷಿಸಿತು. ಇಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯದ ಹಲವಾರು ಜಿಗಳ ಸಾಕಷ್ಟು ಸ್ಪರ್ಧಾ ಆಕಾಂಕ್ಷಿಗಳು ಆಗಮಿಸಿ ಭಾಗವಹಿಸಿ ಹರ್ಷ ವ್ಯಕ್ತಪಡಿಸಿದರು. ಉತ್ಸವದ ಸಮಾರೋಪ ಸಮಾರಂಭಕ್ಕೆ ನಾಡಿನ ಖ್ಯಾತ ಚಲನಚಿತ್ರ ತಾರೆಯರು ಆಗಮಿಸುವ ಮೂಲಕ ಕಾರ್ಯಕ್ರಮಕ್ಕೆ ಇನ್ನಷ್ಟು ರಂಗು ಹೆಚ್ಚಿಸಿದರು.

ಮೈಸೂರು ದಸರಾ, ಕನಕಪುರದ ಕನ ಕೋತ್ಸವ, ಬೆಂಗಳೂರಿನ ಕರಗ ಉತ್ಸವ, ಐತಿಹಾಸಿಕ ಹಂಪಿ ಉತ್ಸವ, ಕರಾವಳಿಯ ಕಂಬಳ, ಪಟ್ಟದಕಲ್ಲು ನೃತ್ಯೋತ್ಸವ, ದಕ್ಷಿಣ ಕನ್ನಡ ಜಿಯ ಕಂಬಳ, ಇದೇ ಸಾಲಿಗೆ ಸದ್ಯ ನಂಜನಗೂಡಿನಲ್ಲಿ ನಡೆದ ಗರಳಪುರಿ ಉತ್ಸವ ತನ್ಮೂಲಕ ರಾಜ್ಯದ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಗ್ರಾಮೀಣ ಕಲೆಗಳನ್ನು ಪ್ರತಿಬಿಂಬಿಸುತ್ತ ಇತಿಹಾಸದ ಪುಟ ಸೇರುತ್ತಿದೆ. ಸರ್ವರ ಸಾಮರಸ್ಯದ ಬೀಡಾದ ನಂಜನಗೂಡಿನಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಿದೆ. ಶಾಸಕ ದರ್ಶನ್ ಧ್ರುವನಾರಾಯಣ್ ತಮ್ಮ ತಂದೆ ಮಾಜಿ ಸಂಸದ ಅಭಿವೃದ್ಧಿ ಹರಿಕಾರರಾಗಿದ್ದ ದಿ.ಧ್ರುವನಾರಾಯಣ ಅವರ ಹಾದಿಯಲ್ಲಿ ಉತ್ಸಾಹಿಯಾಗಿ ಮುನ್ನುಗ್ಗುತ್ತಿರುವುದು ಅತ್ಯಂತ ಗೌರವದ ವಿಚಾರ.

 -ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago