ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯ ವೇಳೆ ಜಾ.ದಳ ಶಾಸಕ ಬಿ.ಟಿ.ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಗಳಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಎರುದ್ಧ ಬಿಜೆಪಿ-ಜಾ.ದಳ ಮೈತ್ರಿಕೂಟ ಕಿಡಿಕಾರುತ್ತಿದ್ದು, ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ರಾಜ್ಯವೇ ಗಮನಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪರ ಮಾತನಾಡಿರುವ ಜಿ.ಟಿ.ದೇವೇಗೌಡರು, ‘ಸಿದ್ದರಾಮಯ್ಯ 40 ವರ್ಷಗಳ ಹಿಂದೆಯೇ ಮಂತ್ರಿಯಾಗಿದ್ದವರು. ಸಾಮಾಜಿಕ ಸೇವೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡವರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ, ಎರಡನೇ ಬಾರಿ ಮುಖ್ಯಮಂತ್ರಿಯಾಗಿ ರಾಜಕೀಯ ಅನುಭವ ಹೊಂದಿದ್ದಾರೆ. ಈಗ ತಮ್ಮ ಮೇಲೆ ಬಂದಿರುವ ಮುಡಾ ಹಗರಣದ ಆರೋಪವನ್ನು ಸಮರ್ಥವಾಗಿ ಎದುರಿಸುತ್ತಾರೆ. ತನಿಖೆಗೆ ಆದೇಶವಾಗಿದೆಯೇ ವಿನಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದಾಗಲಿ, ಅವರನ್ನು ಜೈಲಿಗೆ ಕಳುಹಿಸಿ ಎಂದಾಗಲಿ ಹೇಳಿಲ್ಲ. ಅಷ್ಟಕ್ಕೂ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು? ಯಾವ ಕಾನೂನು ಅವರು ರಾಜೀನಾಮೆ ನೀಡಬೇಕು ಎಂದಿದೆ? ಎಫ್ಐಆರ್ ದಾಖಲಾದವರೆಲ್ಲರೂ ರಾಜೀನಾಮ ಕೊಡಬೇಕು ಎಂದಾದರೆ ಮೊದಲು ಎಚ್.ಡಿ.ಕುಮಾರಸ್ವಾಮಿಯವರು ರಾಜೀನಾಮೆ ಕೊಡಲಿ’ ಎಂದಿದ್ದಾರೆ. ಈ ಹೇಳಿಕೆ ಮೈತ್ರಿಕೂಟದಲ್ಲಿ ಗೊಂದಲ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು.
ಮುಖ್ಯಮಂತ್ರಿ ಸಿದ್ದರಾಮಯ್ಯನವರೂ, ಜಿ.ಟಿ.ದೇವೇಗೌಡರವರು ಹಲವು ವರ್ಷಗಳಿಂದ ಮುಡಾ ಸದಸ್ಯರಾಗಿದ್ದು, ಅವರಿಗೆ ಸತ್ಯ ಏನೆಂದು ಗೊತ್ತಿದೆ. ನನ್ನ ಮೇಲಿನ ಅಭಿಮಾನಕ್ಕೆ ಅಭಿನಂದನೆಗಳು ಎಂದಿದ್ದಾರೆ. ಇವರಿಬ್ಬರ ಈ ಮಾತುಗಳು ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿರುವುದಂತೂ ಸತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…