Andolana originals

ಓದುಗರ ಪತ್ರ: ಸಂಚಲನ ಸೃಷ್ಟಿಸಿದ ಜಿಟಿಡಿ ಹೇಳಿಕೆ

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯ ವೇಳೆ ಜಾ.ದಳ ಶಾಸಕ ಬಿ.ಟಿ.ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಗಳಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಎರುದ್ಧ ಬಿಜೆಪಿ-ಜಾ.ದಳ ಮೈತ್ರಿಕೂಟ ಕಿಡಿಕಾರುತ್ತಿದ್ದು, ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ರಾಜ್ಯವೇ ಗಮನಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪರ ಮಾತನಾಡಿರುವ ಜಿ.ಟಿ.ದೇವೇಗೌಡರು, ‘ಸಿದ್ದರಾಮಯ್ಯ 40 ವರ್ಷಗಳ ಹಿಂದೆಯೇ ಮಂತ್ರಿಯಾಗಿದ್ದವರು. ಸಾಮಾಜಿಕ ಸೇವೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡವರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ, ಎರಡನೇ ಬಾರಿ ಮುಖ್ಯಮಂತ್ರಿಯಾಗಿ ರಾಜಕೀಯ ಅನುಭವ ಹೊಂದಿದ್ದಾರೆ. ಈಗ ತಮ್ಮ ಮೇಲೆ ಬಂದಿರುವ ಮುಡಾ ಹಗರಣದ ಆರೋಪವನ್ನು ಸಮರ್ಥವಾಗಿ ಎದುರಿಸುತ್ತಾರೆ. ತನಿಖೆಗೆ ಆದೇಶವಾಗಿದೆಯೇ ವಿನಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದಾಗಲಿ, ಅವರನ್ನು ಜೈಲಿಗೆ ಕಳುಹಿಸಿ ಎಂದಾಗಲಿ ಹೇಳಿಲ್ಲ. ಅಷ್ಟಕ್ಕೂ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು? ಯಾವ ಕಾನೂನು ಅವರು ರಾಜೀನಾಮೆ ನೀಡಬೇಕು ಎಂದಿದೆ? ಎಫ್‌ಐಆರ್ ದಾಖಲಾದವರೆಲ್ಲರೂ ರಾಜೀನಾಮ ಕೊಡಬೇಕು ಎಂದಾದರೆ ಮೊದಲು ಎಚ್.ಡಿ.ಕುಮಾರಸ್ವಾಮಿಯವರು ರಾಜೀನಾಮೆ ಕೊಡಲಿ’ ಎಂದಿದ್ದಾರೆ. ಈ ಹೇಳಿಕೆ ಮೈತ್ರಿಕೂಟದಲ್ಲಿ ಗೊಂದಲ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೂ, ಜಿ.ಟಿ.ದೇವೇಗೌಡರವರು ಹಲವು ವರ್ಷಗಳಿಂದ ಮುಡಾ ಸದಸ್ಯರಾಗಿದ್ದು, ಅವರಿಗೆ ಸತ್ಯ ಏನೆಂದು ಗೊತ್ತಿದೆ. ನನ್ನ ಮೇಲಿನ ಅಭಿಮಾನಕ್ಕೆ ಅಭಿನಂದನೆಗಳು ಎಂದಿದ್ದಾರೆ. ಇವರಿಬ್ಬರ ಈ ಮಾತುಗಳು ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿರುವುದಂತೂ ಸತ್ಯ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

 

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

59 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago