ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಮುಂದೆ, ಪ್ರತಿ ಶಾಸಕರಿಗೆ ೫ ಟಿಕೆಟ್ ಕೊಡಿಸಿ ಎಂದು ಗೋಗರೆದಿರುವುದು ವಿಪರ್ಯಾಸವೇ ಸರಿ.
ರಾಜ್ಯದ ಜ್ವಲಂತ ಸಮಸ್ಯೆಗಳ ಪರಿಹಾರದ ಬಗ್ಗೆ ಚರ್ಚಿಸಬೇಕಾ ಗಿದ್ದ ವಿಧಾನಸಭೆಯಲ್ಲಿ ಐಪಿಎಲ್ ಕ್ರಿಕೆಟ್ ಮ್ಯಾಚ್ನ ಟಿಕೆಟ್ ನಮಗೆ ಬೇಕು ಎಂದು ಗೋಗರೆದುದರ ಪರಿಣಾಮ ಕೊನೆಗೂ ಪೀಠ, ಪ್ರತಿ ಶಾಸಕರಿಗೂ ೪ ಟಿಕೆಟ್ ಕೊಡಿಸಬೇಕು ಎಂದು ಸರ್ಕಾರಕ್ಕೆ ಆದೇಶ ಹೊರಡಿಸಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶಾಸಕರಿಗೆ ಉಚಿತವಾಗಿ ೪ ವಿಐಪಿ ಐಪಿಎಲ್ ಟಿಕೆಟ್ ನೀಡುತ್ತಿರುವುದು ಸಾಮಾನ್ಯ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





