Andolana originals

ಓದುಗರ ಪತ್ರ: ಮೊಬೈಲ್ ಬಳಕೆ ಮಿತಿ ಮೀರದಿರಲಿ

ಮೊಬೈಲ್ ಗೀಳಿನಿಂದಾಗಿ ಯುವಜನರ ಭವಿಷ್ಯ ಮಸುಕಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮೊಬೈಲ್ ಎಂಬ ಮಾಯಾಜಾಲದಲ್ಲಿ ಹಿರಿಯರು, ಕಿರಿಯರು ಎಂಬ ವಯಸ್ಸಿನ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಸಿಲುಕಿದ್ದಾರೆ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಅನಿವಾರ್ಯ ಕೂಡ ಹೌದು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬಹುತೇಕ ಸೇವಾ ಸೌಲಭ್ಯಗಳನ್ನು ಪಡೆಯಲು ಮೊಬೈಲ್ ತೀರಾ ಅವಶ್ಯ. ಮೊಬೈಲ್ ಇಲ್ಲದ ಬದುಕನ್ನು ಊಹಿಸಿಕೊಳ್ಳುವುದೇ ಕಷ್ಟವಾಗಿದೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳೂ ಮೊಬೈಲ್‌ಗಳಿಗೆ ದಾಸರಾಗಿಬಿಟ್ಟಿದ್ದಾರೆ. ಅನೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ದಿನದ ತಮ್ಮ ಬಹುತೇಕ ವೇಳೆಯನ್ನು ಮೊಬೈಲ್ ಜೊತೆಯಲ್ಲೇ ಕಳೆಯುತ್ತಿರುವುದರಿಂದ ಶೈಕ್ಷಣಿಕವಾಗಿ ಹಿಂದುಳಿಯುತ್ತಿದ್ದಾರೆ. ಇಂದು ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರೇ ಹೆಚ್ಚಾಗಿ ಸಕ್ರಿಯರಾಗಿದ್ದಾರೆ.

ಮೊಬೈಲ್‌ನಿಂದ ಹೊರಬರುವ ವಿಕಿರಣಗಳು ದೀರ್ಘ ಕಾಲದಲ್ಲಿ ದೃಷ್ಟಿ ಮತ್ತು ನರಗಳ ಸಮಸ್ಯೆಗಳನ್ನು ಉಂಟು ಮಾಡಬಹುದು ಎಂಬುದನ್ನು ನರರೋಗಗಳ ತಜ್ಞರೇ ಹೇಳುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು, ಅಗತ್ಯಕ್ಕನುಗುಣವಾಗಿ ಮೊಬೈಲ್ ಬಳಸುವುದು ಉತ್ತಮ. ಅತಿಯಾದರೆ ಅಮೃತ ಕೂಡ ವಿಷವಾಗಿ ಪರಿಣಮಿಸಬಲ್ಲದು ಎಂಬುದನ್ನು ತಿಳಿದು ನಡೆದರೆ ಭವಿಷ್ಯ ಉಜ್ವಲವಾಗುತ್ತದೆ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

3 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

3 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

4 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

4 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

4 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

7 hours ago