Mysore
22
broken clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

dgp murder case

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ.

ಗದಗ ಜಿಲ್ಲೆಯ ಕೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎಂ.ಪಾಟೀಲ್ ಅವರು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ಸೇರುವ ಪ್ರತಿ ವಿದ್ಯಾರ್ಥಿಗೂ ತಮ್ಮ ಸ್ವಂತ ಹಣದಲ್ಲಿ ಸಾವಿರ ರೂ. ಠೇವಣಿ ನೀಡಲು ಮುಂದಾಗಿರುವುದು ಶ್ಲಾಘನೀಯ. ಶಿಕ್ಷಕರ ಈ ಕ್ರಮದಿಂದಾಗಿ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗುವುದರೊಂದಿಗೆ ಶಾಲೆಗಳನ್ನು ಉಳಿಸಲು ಸಹಕಾರಿಯಾಗುತ್ತದೆ. ಶಿಕ್ಷಕರ ಈ ನಡೆ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರಿಗೂ ಮಾದರಿಯಾಗಿದೆ.

– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

 

 

Tags:
error: Content is protected !!