1904ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ನಗರವನ್ನು ವ್ಯವಸ್ಥಿತವಾಗಿ ರೂಪಿಸಬೇಕು ಎಂಬುದಕ್ಕಾಗಿ ನಗರ ಅಭಿವೃದ್ಧಿ ವಿಶ್ವಸ್ಥ ಮಂಡಳಿಯನ್ನು ಸ್ಥಾಪಿಸಿದರು. ನಂತರದ ದಿನಗಳಲ್ಲಿ ಅದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವಾಗಿ ಬದಲಾಯಿತು.
ಈಗ ಈ ಪ್ರಾಧಿಕಾರ ಹಗರಣಗಳಲ್ಲಿ ಮುಳುಗಿ ಹೋಗಿರುವುದು ಮೈಸೂರಿಗೆ ಒಂದು ಕಪ್ಪು ಚುಕ್ಕೆಯಾಗಿದೆ. ಮನೆ ನಿರ್ಮಾಣ ಮಾಡಬೇಕು ಎಂಬ ಕನಸು ಕಾಣುವ ಸಾಮಾನ್ಯ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ನಿವೇಶನಗಳನ್ನು ನೀಡಬೇಕಿದ್ದ ನಗರಾಭಿವೃದ್ಧಿ ಪ್ರಾಧಿಕಾರ ಈಗ ಉಳ್ಳವರಿಗೆ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಲುಕಿದೆ. ಮುಡಾ ಹೊಸ ಹೊಸ ಬಡಾವಣೆಗಳನ್ನು ನಿರ್ಮಿಸಿ ಜನಸಾಮಾನ್ಯರ ಕೈಗೆಟುಕುವ ದರದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಬೇಕಿತ್ತು. ಆದರೆ, ಮುಡಾ ಹಗರಣಗಳನ್ನು ಗಮನಿಸಿದರೆ ಸಾಮಾನ್ಯ ಜನರಿಗೆ ನಿವೇಶನಗಳು ಸಿಗುವುದು ಕನಸಿನ ಮಾತು ಅನಿಸುತ್ತದೆ.
ಮುಡಾದಲ್ಲಿ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳು ಮುಡಾವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು, ಅಕ್ರಮವೆಸಗಿದ್ದಾರೆ ಎನ್ನಲಾಗಿದೆ. ಆದ್ದರಿಂದ ಈ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಸಿ ಅಕ್ರಮವೆಸಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…