ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ರಾಜ್ಯದಾದ್ಯಂತ ಚರ್ಚೆಯಾಗುತ್ತಿದ್ದು, ಸಾವಿರಾರು ಕೋಟಿರೂ. ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಗಮನಿಸಿದರೆ, ಎಲ್ಲ ರಾಜಕೀಯ ಪಕ್ಷಗಳ ಕೆಲ ನಾಯಕರು ಫಲಾನುಭವಿಗಳಾಗಿದ್ದಾರೆ ಅನಿಸುತ್ತದೆ. ಈ ಪ್ರಕರಣ ನಿಷ್ಪಕ್ಷಪಾತವಾಗಿ, ಪ್ರಾಮಾಣಿಕವಾಗಿ ತನಿಖೆಯಾದರೆ ಆ ರಾಜಕೀಯ ನಾಯಕರ ಮುಖವಾಡ ಕಳಚಿ ಬೀಳುತ್ತದೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮೈಸೂರಿನ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್ ‘ಮುಡಾದಲ್ಲಿ ಇಂತಹ ಹಗರಣಗಳು ಸಾಮಾನ್ಯವಾಗಿ ನಡೆಯುತ್ತಿರುತ್ತವೆ’ ಎಂದಿರುವುದು ಹಗರಣ ನಡೆದಿದೆ ಎಂಬುದಕ್ಕೆ ಇಂಬುಕೊಟ್ಟಿದೆ.
ಈ ಪ್ರಕರಣದಲ್ಲಿ ಬಹುಪಾಲು ರಾಜಕಾರಣಿಗಳೇ ಭಾಗಿ ಯಾಗಿರುವುದರಿಂದ ಸೂಕ್ತ ತನಿಖೆಯಾಗಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಲಿದೆ ಎಂಬ ನಂಬಿಕೆ ಜನರಲ್ಲಿ ಇಲ್ಲ. ಕೆಲವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಬಹುದೇ ವಿನಾ ಅಕ್ರಮವಾಗಿ ಹಂಚಿಕೆಯಾಗಿರುವ ನಿವೇಶನಗಳು ಮರಳಿ ಮುಡಾ ವಶಕ್ಕೆ ಬರಲಿವೆ, ಅವು ಜನಸಾಮಾನ್ಯರಿಗೆ ಹಂಚಿಕೆಯಾಗಲಿವೆ ಎಂಬ ವಿಶ್ವಾಸ ಯಾರಿಗೂ ಇಲ್ಲ. ಆದ್ದರಿಂದ ತನಿಖಾಧಿಕಾರಿಗಳು ಈ ಬಗ್ಗೆ ಪ್ರಾಮಾಣಿಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ಸಾರ್ವಜನಿಕರ ವಿಶ್ವಾಸ ಉಳಿಸಿಕೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…