ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ರಾಜ್ಯದಾದ್ಯಂತ ಚರ್ಚೆಯಾಗುತ್ತಿದ್ದು, ಸಾವಿರಾರು ಕೋಟಿರೂ. ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಗಮನಿಸಿದರೆ, ಎಲ್ಲ ರಾಜಕೀಯ ಪಕ್ಷಗಳ ಕೆಲ ನಾಯಕರು ಫಲಾನುಭವಿಗಳಾಗಿದ್ದಾರೆ ಅನಿಸುತ್ತದೆ. ಈ ಪ್ರಕರಣ ನಿಷ್ಪಕ್ಷಪಾತವಾಗಿ, ಪ್ರಾಮಾಣಿಕವಾಗಿ ತನಿಖೆಯಾದರೆ ಆ ರಾಜಕೀಯ ನಾಯಕರ ಮುಖವಾಡ ಕಳಚಿ ಬೀಳುತ್ತದೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮೈಸೂರಿನ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್ ‘ಮುಡಾದಲ್ಲಿ ಇಂತಹ ಹಗರಣಗಳು ಸಾಮಾನ್ಯವಾಗಿ ನಡೆಯುತ್ತಿರುತ್ತವೆ’ ಎಂದಿರುವುದು ಹಗರಣ ನಡೆದಿದೆ ಎಂಬುದಕ್ಕೆ ಇಂಬುಕೊಟ್ಟಿದೆ.
ಈ ಪ್ರಕರಣದಲ್ಲಿ ಬಹುಪಾಲು ರಾಜಕಾರಣಿಗಳೇ ಭಾಗಿ ಯಾಗಿರುವುದರಿಂದ ಸೂಕ್ತ ತನಿಖೆಯಾಗಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಲಿದೆ ಎಂಬ ನಂಬಿಕೆ ಜನರಲ್ಲಿ ಇಲ್ಲ. ಕೆಲವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಬಹುದೇ ವಿನಾ ಅಕ್ರಮವಾಗಿ ಹಂಚಿಕೆಯಾಗಿರುವ ನಿವೇಶನಗಳು ಮರಳಿ ಮುಡಾ ವಶಕ್ಕೆ ಬರಲಿವೆ, ಅವು ಜನಸಾಮಾನ್ಯರಿಗೆ ಹಂಚಿಕೆಯಾಗಲಿವೆ ಎಂಬ ವಿಶ್ವಾಸ ಯಾರಿಗೂ ಇಲ್ಲ. ಆದ್ದರಿಂದ ತನಿಖಾಧಿಕಾರಿಗಳು ಈ ಬಗ್ಗೆ ಪ್ರಾಮಾಣಿಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ಸಾರ್ವಜನಿಕರ ವಿಶ್ವಾಸ ಉಳಿಸಿಕೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…