ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦ ತ್ಯಾಜ್ಯ ಮುಕ್ತ ತಾಣಗಳು ಕಾರ್ಯಕ್ರಮದ ಭಾಗವಾಗಿ ಫೈವ್ ಲೈಟ್ ಸರ್ಕಲ್ ಸಮೀಪದ ದಾವೂದ್ ಖಾನ್ ರಸ್ತೆಯಲ್ಲಿದ್ದ ಕಸ ಹಾಕುವ ತಾಣವನ್ನು ಸ್ವತಃ ಮಹಾನಗರಪಾಲಿಕೆ ಆಯುಕ್ತರಾದ ಎಂ. ಕೆ. ಸವಿತಾ ಅವರೇ ನೇತೃತ್ವ ವಹಿಸಿ,ಸ್ವಚ್ಛಗೊಳಿಸಿ ತ್ಯಾಜ್ಯ ಮುಕ್ತತಾಣವನ್ನಾಗಿ ಪರಿವರ್ತಿಸಿರುವುದು ಶ್ಲಾಘನೀಯ.
ಇದೇ ವೇಳೆ ಆಯುಕ್ತರು ತ್ಯಾಜ್ಯದ ರಾಶಿ ಇದ್ದ ತಾಣಕ್ಕೆ ತೆರಳಿ ಹಸಿ ಕಸ,ಒಣ ಕಸವನ್ನು ಬೇರ್ಪಡಿಸಿ,ಪ್ರತ್ಯೇಕ ಡಬ್ಬಿಗಳಲ್ಲಿ ತುಂಬಿಸಿದ ನಂತರ ಕಸದ ರಾಶಿಯಿಂದ ಕೂಡಿದ್ದ ರಸ್ತೆಯನ್ನು ಸ್ವಚ್ಛಗೊಳಿಸಿ, ಈ ತಾಣದಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ನಿರಂತರ ಮೇಲ್ವಿಚಾರಣೆ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಹೇಳಿರುವುದು ಮೆಚ್ಚುವಂತಹದ್ದು. ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸ್ವಚ್ಛತಾ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಂಡರೆ ಮೈಸೂರು ಮತ್ತೆ ದೇಶದ ನಂಬರ್ ಒನ್ ಸ್ವಚ್ಛನಗರ ಪ್ರಶಸ್ತಿ ಗಳಿಸುವುದರಲ್ಲಿ ಸಂಶಯವಿಲ್ಲ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…
ಎಸ್.ಗಂಗಾಧರಯ್ಯ ಕಾಲೇಜು ಹಾಗೂ ಯೂನಿ ವರ್ಸಿಟಿಗಳೇ ಚಳವಳಿಗಳ ತಾಲೀಮು ರಂಗವಾಗಿದ್ದ ಕಾಲವೊಂದಿತ್ತು. ಮೇಷ್ಟ್ರುಗಳೂ ವಿದ್ಯಾರ್ಥಿಗಳನ್ನು ಚಳವಳಿಗಳಿಗೆ ಪ್ರೇರೇಪಿಸುತ್ತಿದ್ದ ಹಾಗೂ ಖುದ್ದು…