ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಮೈಸೂರು- ಹುಣಸೂರು ರಸ್ತೆಯ ಹಿನಕಲ್ ಭಾಗದಲ್ಲಿ ಬೀದಿ ದೀಪಗಳು ಕೆಟ್ಟು ತಿಂಗಳುಗಳೇ ಕಳೆದಿದ್ದು, ಕಗ್ಗತ್ತಲು ಆವರಿಸಿದೆ.
ಮೈಸೂರು ನಗರಪಾಲಿಕೆಯ ಅಧಿಕಾರಿಗಳಾಗಲಿ, ಚುನಾಯಿತ ಪ್ರತಿನಿಧಿಗಳಾಗಲಿ, ಸ್ಥಳೀಯ ಗ್ರಾಮ ಪಂಚಾಯಿತಿಯ ಅಧಿಕಾರಿಗಳಾಗಲೀ ಇತ್ತ ಗಮನ ಕೊಡದೆ ನಿರ್ಲಕ್ಷ ವಹಿಸುತ್ತಿರುವುದು ವಿಪರ್ಯಾಸವೇ ಸರಿ. ಐಶ್ವರ್ಯ ಪೆಟ್ರೋಲ್ ಬಂಕ್ನಿಂದ ಹೂಟಗಳ್ಳಿ ಸಿಗ್ನಲ್ವರೆಗೂ ಇದೇ ಸಮಸ್ಯೆ ಇದ್ದು, ಜನರು ಕಗ್ಗತ್ತಲಿನಲ್ಲಿಯೇ ಓಡಾಡಬೇಕಾಗಿದೆ. ಅಲ್ಲದೆ ಈ ರಸ್ತೆಯಲ್ಲಿ ದಿನದ ೨೪ ಗಂಟೆಯೂ ವಾಹನ ದಟ್ಟಣೆ ಇರುವುದರಿಂದ ಸಂಜೆಯ ವೇಳೆ ಜನರು ಹಿನಕಲ್, ಹೂಟಗಳ್ಳಿ ಅಥವಾ ಬೆಳವಾಡಿಯ ಕಡೆಗೆ ತೆರಳಲು ಈ ಹೆದ್ದಾರಿಯನ್ನು ದಾಟಬೇಕಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಆತಂಕದಲ್ಲಿಯೇ ರಸ್ತೆ ದಾಟಬೇಕಿದೆ. ಹೆದ್ದಾರಿಯಲ್ಲೇ ಬೀದಿ ದೀಪಗಳು ಕೆಟ್ಟು ನಿಂತರೆ, ಇನ್ನು ಇತರೆ ರಸ್ತೆಗಳ ಪಾಡೇನು? ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಗಮನಹರಿಸಿ ಬೀದಿ ದೀಪಗಳನ್ನು ಸರಿಪಡಿಸಬೇಕಿದೆ.
–ಆರ್.ಯಶಸ್, ವಿಜಯನಗರ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…