Andolana originals

ಓದುಗರ ಪತ್ರ: ಕಗತ್ತಲಲ್ಲಿ ಮುಳುಗುತ್ತಿವೆ  ಮೈಸೂರಿನ ಹೆದ್ದಾರಿಗಳು

ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಮೈಸೂರು- ಹುಣಸೂರು ರಸ್ತೆಯ ಹಿನಕಲ್ ಭಾಗದಲ್ಲಿ ಬೀದಿ ದೀಪಗಳು ಕೆಟ್ಟು ತಿಂಗಳುಗಳೇ ಕಳೆದಿದ್ದು, ಕಗ್ಗತ್ತಲು ಆವರಿಸಿದೆ.

ಮೈಸೂರು ನಗರಪಾಲಿಕೆಯ ಅಧಿಕಾರಿಗಳಾಗಲಿ, ಚುನಾಯಿತ ಪ್ರತಿನಿಧಿಗಳಾಗಲಿ, ಸ್ಥಳೀಯ ಗ್ರಾಮ ಪಂಚಾಯಿತಿಯ ಅಧಿಕಾರಿಗಳಾಗಲೀ ಇತ್ತ ಗಮನ ಕೊಡದೆ ನಿರ್ಲಕ್ಷ  ವಹಿಸುತ್ತಿರುವುದು ವಿಪರ್ಯಾಸವೇ ಸರಿ. ಐಶ್ವರ್ಯ ಪೆಟ್ರೋಲ್ ಬಂಕ್‌ನಿಂದ ಹೂಟಗಳ್ಳಿ ಸಿಗ್ನಲ್‌ವರೆಗೂ ಇದೇ ಸಮಸ್ಯೆ ಇದ್ದು, ಜನರು ಕಗ್ಗತ್ತಲಿನಲ್ಲಿಯೇ ಓಡಾಡಬೇಕಾಗಿದೆ. ಅಲ್ಲದೆ ಈ ರಸ್ತೆಯಲ್ಲಿ ದಿನದ ೨೪ ಗಂಟೆಯೂ ವಾಹನ ದಟ್ಟಣೆ ಇರುವುದರಿಂದ ಸಂಜೆಯ ವೇಳೆ ಜನರು ಹಿನಕಲ್, ಹೂಟಗಳ್ಳಿ ಅಥವಾ ಬೆಳವಾಡಿಯ ಕಡೆಗೆ ತೆರಳಲು ಈ ಹೆದ್ದಾರಿಯನ್ನು ದಾಟಬೇಕಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಆತಂಕದಲ್ಲಿಯೇ ರಸ್ತೆ ದಾಟಬೇಕಿದೆ. ಹೆದ್ದಾರಿಯಲ್ಲೇ ಬೀದಿ ದೀಪಗಳು ಕೆಟ್ಟು ನಿಂತರೆ, ಇನ್ನು ಇತರೆ ರಸ್ತೆಗಳ ಪಾಡೇನು? ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಗಮನಹರಿಸಿ ಬೀದಿ ದೀಪಗಳನ್ನು ಸರಿಪಡಿಸಬೇಕಿದೆ.

ಆರ್.ಯಶಸ್, ವಿಜಯನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

8 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

10 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

11 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

12 hours ago