ಓದುಗರ ಪತ್ರ
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಗರಗಳ ಪಟ್ಟಿ ಪ್ರಕಟಗೊಂಡಿದ್ದು, ಈ ಬಾರಿ ಮೈಸೂರು ನಗರವು ಮೂರನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿಯಾಗಿದೆ. ೨೦೧೫ರಲ್ಲಿ ಮೈಸೂರು ನಗರ ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಪಡೆದಿತ್ತು. ಆದರೆ ೨೦೨೩ರಲ್ಲಿ ೨೭ನೇ ಸ್ಥಾನ ಪಡೆದು ನಿರಾಸೆ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಮೈಸೂರನ್ನು ಸ್ವಚ್ಛತೆಯಲ್ಲಿ ಮತ್ತೆ ಮೊದಲ ಸ್ಥಾನಕ್ಕೆ ತರಬೇಕು ಎಂಬ ನಿಟ್ಟಿನಲ್ಲಿ ಮೈಸೂರು ನಗರಪಾಲಿಕೆ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು
ಶ್ರಮಿಸಿದ ಫಲವಾಗಿ ಈ ಸಾಲಿನಲ್ಲಿ ಮೈಸೂರು ನಗರ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಮೂರನೇ ಸ್ಥಾನ ಪಡೆದಿದೆ. ಪ್ರಥಮ ಸ್ಥಾನವನ್ನು ಇಂದೋರ್ ಪಡೆದಿದ್ದು, ಸ್ವಚ್ಛ ಸರ್ವೇಕ್ಷಣೆಯಲ್ಲಿ ಪ್ರಮುಖ ೧೦ ನಗರಗಳಲ್ಲಿ ಮೈಸೂರು ನಗರ ಇರುವುದು ಹೆಮ್ಮೆಯ ವಿಷಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಹೊರ ಭಾಗದಲ್ಲಿ ಸಾರ್ವಜನಿಕರು ಕಸವನ್ನು ಸುರಿಯುತ್ತಿದ್ದು, ವಾತಾವರಣ ಹಾಳಾಗುತ್ತಿದೆ. ಮಹಾನಗರ ಪಾಲಿಕೆಯವರು ಕೂಡಲೇ ಎಲ್ಲೆಂದರಲ್ಲಿ ಕಸ ಸುರಿಯದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು ಹಾಗೂ ನಿರ್ಲಕ್ಷ್ಯ ವಹಿಸುವವರಿಗೆ ದಂಡವನ್ನು ವಿಧಿಸಬೇಕು. ಪೌರಕಾರ್ಮಿಕರ ಪರಿಶ್ರಮದಿಂದಲೇ ಇಂದು ಮೈಸೂರು ನಗರ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಮೂರನೇ ಸ್ಥಾನ ಪಡೆದಿದೆ. ಪೌರ ಕಾರ್ಮಿಕರಿಗೆ ಮತ್ತು ನಗರ ಪಾಲಿಕೆ ಆಯುಕ್ತರು,ಅಧಿಕಾರಿಗಳು, ನೌಕರರಿಗೆ ಮೈಸೂರು ಜನತೆಯ ಪರವಾಗಿ ಹೃದಯ ಪೂರ್ವಕ ಅಭಿನಂದನೆಗಳು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…