ಓದುಗರ ಪತ್ರ
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಗರಗಳ ಪಟ್ಟಿ ಪ್ರಕಟಗೊಂಡಿದ್ದು, ಈ ಬಾರಿ ಮೈಸೂರು ನಗರವು ಮೂರನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿಯಾಗಿದೆ. ೨೦೧೫ರಲ್ಲಿ ಮೈಸೂರು ನಗರ ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಪಡೆದಿತ್ತು. ಆದರೆ ೨೦೨೩ರಲ್ಲಿ ೨೭ನೇ ಸ್ಥಾನ ಪಡೆದು ನಿರಾಸೆ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಮೈಸೂರನ್ನು ಸ್ವಚ್ಛತೆಯಲ್ಲಿ ಮತ್ತೆ ಮೊದಲ ಸ್ಥಾನಕ್ಕೆ ತರಬೇಕು ಎಂಬ ನಿಟ್ಟಿನಲ್ಲಿ ಮೈಸೂರು ನಗರಪಾಲಿಕೆ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು
ಶ್ರಮಿಸಿದ ಫಲವಾಗಿ ಈ ಸಾಲಿನಲ್ಲಿ ಮೈಸೂರು ನಗರ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಮೂರನೇ ಸ್ಥಾನ ಪಡೆದಿದೆ. ಪ್ರಥಮ ಸ್ಥಾನವನ್ನು ಇಂದೋರ್ ಪಡೆದಿದ್ದು, ಸ್ವಚ್ಛ ಸರ್ವೇಕ್ಷಣೆಯಲ್ಲಿ ಪ್ರಮುಖ ೧೦ ನಗರಗಳಲ್ಲಿ ಮೈಸೂರು ನಗರ ಇರುವುದು ಹೆಮ್ಮೆಯ ವಿಷಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಹೊರ ಭಾಗದಲ್ಲಿ ಸಾರ್ವಜನಿಕರು ಕಸವನ್ನು ಸುರಿಯುತ್ತಿದ್ದು, ವಾತಾವರಣ ಹಾಳಾಗುತ್ತಿದೆ. ಮಹಾನಗರ ಪಾಲಿಕೆಯವರು ಕೂಡಲೇ ಎಲ್ಲೆಂದರಲ್ಲಿ ಕಸ ಸುರಿಯದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು ಹಾಗೂ ನಿರ್ಲಕ್ಷ್ಯ ವಹಿಸುವವರಿಗೆ ದಂಡವನ್ನು ವಿಧಿಸಬೇಕು. ಪೌರಕಾರ್ಮಿಕರ ಪರಿಶ್ರಮದಿಂದಲೇ ಇಂದು ಮೈಸೂರು ನಗರ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಮೂರನೇ ಸ್ಥಾನ ಪಡೆದಿದೆ. ಪೌರ ಕಾರ್ಮಿಕರಿಗೆ ಮತ್ತು ನಗರ ಪಾಲಿಕೆ ಆಯುಕ್ತರು,ಅಧಿಕಾರಿಗಳು, ನೌಕರರಿಗೆ ಮೈಸೂರು ಜನತೆಯ ಪರವಾಗಿ ಹೃದಯ ಪೂರ್ವಕ ಅಭಿನಂದನೆಗಳು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…