ಮೈಸೂರಿನಲ್ಲಿ ವರ್ತುಲ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರು ಉಪಯೋಗಿಸಲು ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ದಿವಂಗತ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರ ಹೆಸರನ್ನು ವರ್ತುಲ ರಸ್ತೆಗೆ ನಾಮಕರಣ ಮಾಡಲು ೨೦೧೧ರಲ್ಲೇ ಮೈಸೂರು ಮಹಾನಗರ ಪಾಲಿಕೆ ನಿರ್ಣಯ ಮಾಡಿದ್ದರೂ ಇದುವರೆವಿಗೆ ಅನುಷ್ಠಾನ ಆಗದಿರುವುದು ದುರಂತವೇ ಸರಿ. ದೂರದೃಷ್ಟಿ ವ್ಯಕ್ತಿತ್ವ ಹೊಂದಿದ್ದ ಎಸ್. ಎಂ. ಕೃಷ್ಣ ಅವರು ಮೈಸೂರಿನ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿ ಉಳ್ಳವರಾಗಿದ್ದರು ಎಂಬುದಕ್ಕೆ ವರ್ತುಲ ರಸ್ತೆ ನಿರ್ಮಾಣಕ್ಕೆ ೨೦೦೩ರಲ್ಲೇ ಚಾಲನೆ ನೀಡಿ, ಅಗತ್ಯ ಅನುದಾನದ ಜೊತೆಗೆ ಎಲ್ಲಾ ರೀತಿಯ ನೆರವು ನೀಡಿರುವುದೇ ಸಾಕ್ಷಿಯಾಗಿದೆ. ಮೈಸೂರು ಮಹಾ ನಗರಪಾಲಿಕೆ ನಿರ್ಣಯ ಕೈಗೊಂಡಿರುವಂತೆ ಎಸ್. ಎಂ. ಕೃಷ್ಣ ಅವರ ಹೆಸರನ್ನು ಈಗಲಾದರೂ ಅಂತಿಮಗೊಳಿಸುವುದು ಸೂಕ್ತ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…