ಓದುಗರ ಪತ್ರ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ನೀಡಿದಷ್ಟು ಮನ್ನಣೆಯನ್ನು ಟಿಪ್ಪು ಸುಲ್ತಾನ್ ಹಾಗೂ ಮಿರ್ಜಾ ಇಸ್ಮಾಯಿಲ್ ಅವರಿಗೆ ನೀಡಿಲ್ಲ ಎಂದು ಮೈಸೂರು ಸಾಹಿತ್ಯ ಸಂಭ್ರಮದ ೯ನೇ ಆವೃತ್ತಿ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಹೇಳಿರುವುದು ಸರಿಯಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಕನ್ನಡಿಗರಾದ ನಾವು ‘ಕೃಷ್ಣರಾಜ ಭೂಪ ಮನೆ ಮನೆ ದೀಪ’ ಹಾಗೂ ‘ಆಡು ಮುಟ್ಟದ ಸೊಪ್ಪಿಲ್ಲ , ಕೃಷ್ಣರಾಜ ಒಡೆಯರ್ ಮಾಡದ ಕೆಲಸವಿಲ್ಲ’ ಎಂಬ ಮಾತುಗಳನ್ನು ಆಗಿಂದಾಗ್ಗೆ ಕೇಳುತ್ತಾ ಇರುತ್ತೇವೆ.
ಈ ಮಾತುಗಳೇ ಅವರ ಸಾಧನೆಯನ್ನು ತಿಳಿಸುತ್ತವೆ. ಮಹಾತ್ಮ ಗಾಂಧೀಜಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ರಾಜರ್ಷಿ ಎಂದು ಕರೆದಿರುವುದು ಮಣಿಶಂಕರ್ ಅಯ್ಯರ್ ಅವರಿಗೆ ತಿಳಿದಿಲ್ಲವೆಂದು ಕಾಣುತ್ತದೆ. ನಾಲ್ವಡಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಣಿ ಶಂಕರ್ ಅಯ್ಯರ್ ಅವರಿಗೆ ಮಾಹಿತಿ ಕೊರತೆ ಇರಬಹುದು. ಟಿಪ್ಪು ಸುಲ್ತಾನ್ ಹಾಗೂ ಮಿರ್ಜಾ ಇಸ್ಮಾಯಿಲ್ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆಯನ್ನು ಕನ್ನಡಿಗರು ಇಂದಿಗೂ ಸ್ಮರಿಸುತ್ತಾರೆ. ಈ ಬಗ್ಗೆ ಮಣಿ ಶಂಕರ್ ಅಯ್ಯರ್ ಅವರು ಅರಿಯುವುದು ಅಗತ್ಯ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…